Mandya, ಮೇ 1 -- ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾಪಂಚಾಯಿತಿ ವ್ಯಾಪ್ತಿಯ ವಿವಿಧ ಇಲಾಖೆಗಳ ನೌಕರರು ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗುವ ನಿಗಾ ಇಡುವ ಜತೆಗೆ ಬಯೋಮೆಟ್ರಿಕ್‌ ವ್ಯವಸ್ಥೆ ಬಿಗಿಗೊಳಿಸಿ ಕಚೇರಿ ತಪ್ಪಿಸಿಕೊಳ್ಳುವವರ ವಿರುದ್ದ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ. ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ನೌಕರರು ಕರ್ತವ್ಯದ ವೇಳೆಯಲ್ಲಿ ಗೈರಾದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಲಾಗಿದ್ದು, ಪ್ರತಿ ವಾರ ಆಯಾ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಜರಾತಿ ಹಾಗೂ ಚಲನ ವಲನ ರಿಜಿಸ್ಟರ್ ನಲ್ಲಿ ವಿವರ ಪಡೆದು ಪರಿಶೀಲಿಸುವುದು. ಗೈರು ಹಾಜರಿ ಕಂಡು ಬಂದಲ್ಲಿ ವಿವರ ಪಡೆದುಕೊಳ್ಳುವುದು ಹಾಗೂ ಪ್ರತಿ 15 ದಿನಕೊಮ್ಮೆ ವಿವರವನ್ನು ಜಿಲ್ಲಾ ಪಂಚಾಯತ್ ಗೆ ವರದಿ ಸಲ್ಲಿಸುವುದು. ಎರಡಕ್ಕಿಂತ ಹೆಚ್ಚು ಬಾರಿ...