Bangalore, ಮೇ 13 -- ಬೆಂಗಳೂರು: ಇಡೀ ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕ ಸರ್ಕಾರ ಪರಿಶಿಷ್ಟ ಜಾತಿಗಳಲ್ಲಿ (SC) ಒಳ ಮೀಸಲಾತಿ ಜಾರಿಗೊಳಿಸುವ ಉದ್ದೇಶದಿಂದ ಮೊಬೈಲ್‌ ಆ್ಯಪ್ ಬಳಸಿ ಪರಿಶಿಷ್ಟ ಜಾತಿಯ ಕುಟುಂಬಗಳ ದತ್ತಾಂಶ ಸಂಗ್ರಹಿಸಲು ಆರಂಭಿಸಿದೆ. ಈ ಸಮೀಕ್ಷೆಗೆ ಸಂಬಂಧಿಸಿದ ಸಮಗ್ರ ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈ ಮೂಲಕ ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರದ ಮಾದರಿಯನ್ನು ಅನುಸರಿಸಲು ಮುಂದಾಗಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮುಂದಿನ ದಶಕದ ಜನಗಣತಿಯ ಜೊತೆಗೆ ಜಾತಿ ಗಣತಿಯನ್ನೂ ನಡೆಸಲು ತೀರ್ಮಾನಿಸಿರುವುದಾಗಿ ಪ್ರಕಟಿಸಿದ್ದರು. ರಾಜ್ಯ ಸರ್ಕಾರ ಮೊಬೈಲ್‌ ಆ್ಯಪ್‌ ಬಳಸಿ ಪರಿಶಿಷ್ಟ ಜಾತಿಯ ಕುಟುಂಬಗಳ ದತ್ತಾಂಶ ಸಂಗ್ರಹಿಸುತ್ತಿದೆ.ಮೊಬೈಲ್‌ ಆ್ಯಪ್‌ ಸಮೀಕ್ಷೆ ಕುರಿತ ಮಾಹಿತಿಯನ್ನು ಹಂಚಿಕೊಳ್ಳುವಂತೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಕಾರ್ಯದರ್ಶಿಗಳು ರ...