ಭಾರತ, ಏಪ್ರಿಲ್ 7 -- ಬೆಂಗಳೂರು: ಜನಾಕ್ರೋಶ ಯಾತ್ರೆ ಕೈಗೊಂಡಿರುವ ರಾಜ್ಯ ಬಿಜೆಪಿ ನಾಯಕರಿಗೆ ನಾನು ಶುಭ ಕೋರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ ಮನೆಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು ಈ ಯಾತ್ರೆ ನೆರವಾಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಇಷ್ಟೊಂದು ಅಸಮರ್ಥ, ನಿರ್ಲಜ್ಜ ಮತ್ತು ಜನವಿರೋಧಿ ಪ್ರತಿಪಕ್ಷವನ್ನು ರಾಜ್ಯ ಎಂದೂ ಕಂಡಿಲ್ಲ. ಸ್ವಪಕ್ಷೀಯರೇ ಆರೋಪಿಸುವಂತೆ "ಪೇಮೆಂಟ್ ಸೀಟ್" ನಲ್ಲಿ ಕೂತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ? ನಮ್ಮನ್ನು ಪ್ರಶ್ನಿಸುವ ಮೊದಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅವರ ಶಾಸಕ ಮಿತ್ರರು ಕಳೆದೆ ಎರಡು ವರ್ಷಗಳಿಂದ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿ...