ಭಾರತ, ಮೇ 27 -- ಮೈಸೂರು:ಕೇರಳದ ವಯನಾಡು ಭಾಗದಲ್ಲಿ ಮೂರು ದಿನದಿಂದ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆಯ ಕಬಿನಿ ಜಲಾಶಯದಲ್ಲಿ ಕಾಣುತ್ತಿದೆ. ಅದೇ ರೀತಿ ಕೊಡಗು ಜಿಲ್ಲೆಯ ಹಲವು ಭಾಗದಲ್ಲೂ ನಿರಂತರ ಮಳೆ ಸುರಿದದ್ದು ಕಾವೇರಿ ನದಿ ಪೂರ್ಣ ಪ್ರಮಾಣದಲ್ಲಿ ಹರಿದು ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯದ ಒಳಹರಿವಿನ ಏರಿಕೆಯಲ್ಲಿ ಗೋಚರಿಸುತ್ತಿದೆ. ಮೇ ತಿಂಗಳಿನಲ್ಲಿಯೇ ಕಬಿನಿ ಹಾಗೂ ಕೆಆರ್ಎಸ್ ಜಲಾಶಯಗಳಿಗೆ ಇಷ್ಟು ಪ್ರಮಾಣದ ಒಳಹರಿವಿನ ಪ್ರಮಾಣ ಇರುವುದು ಇತ್ತೀಚಿನ ವರ್ಷಗಳಲ್ಲಿ ಇದೇ ಮೊದಲು. ಜೂನ್ನಲ್ಲಿ ಮುಂಗಾರು ಚುರುಕುಗೊಂಡು ಒಳಹರಿವಿನ ಪ್ರಮಾಣ ಹೆಚ್ಚುತ್ತಿತ್ತು.ಅದಕ್ಕಿಂತ ಮೊದಲೇ ಮಳೆ ಪ್ರಮಾಣ ಹೆಚ್ಚಿರುವುದರಿಂದ ಜಲಾಶಯಕ್ಕೂ ಯಥೇಚ್ಛ ನೀರು ಹರಿದು ಬರುತ್ತಿದೆ. ಈ ಬಾರಿ ಎರಡೂ ಜಲಾಶಯಗಳು ಬೇಗನೇ ತುಂಬುವ ವಿಶ್ವಾಸವೂ ವ್ಯಕ್ತವಾಗಿದೆ. ಎರಡು ವರ್ಷದಿಂದ ಕಬಿನಿ ಹಾಗೂ ಕೆಆರ್ಎಸ್ ಜಲಾಶಯಗಳು ಭರ್ತಿಯಾಗಿರಲೇ ಇಲ್ಲ. ಆದರೆ ಹಿಂದಿನ ವರ್ಷ ಮಾತ್ರ ಉತ್ತಮ ಮಳೆಯಾಗಿದ್ದರಿಂದ ಕಬಿನಿ ಜಲಾಶಯ ಬೇಗನೇ ತುಂಬಿದರೆ ಕ...
Click here to read full article from source
To read the full article or to get the complete feed from this publication, please
Contact Us.