Kodagu, ಮೇ 27 -- ಕೊಡಗು: ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು. ನಾಗರಹೊಳೆ ಭಾಗದಲ್ಲೂ ಎಡಬಿಡದೇ ಮಳೆ ಸುರಿಯುತ್ತಿದೆ. ಕೊಡಗಿನ ಭಾಗದಲ್ಲಂತೂ ನಾಲ್ಕು ದಿನದಿಂದ ಮಳೆಯಾಗುತ್ತಿದ್ದು. ಜನಜೀವನ ಅಸ್ತವ್ಯಸ್ತಗೊಂಡಿದೆ. ಇದರ ನಡುವೆ ಭಾರೀ ಮಳೆ ಕಾರಣದಿಂದ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಎರಡು ಕಡೆಗಳಲ್ಲಿ ಸಫಾರಿಯನ್ನು ಅನಿರ್ದಿಷ್ಟ ಕಾಲದವರೆಗೂ ಬಂದ್‌ ಮಾಡಲಾಗಿದೆ. ಕೊಡಗಿನ ಕುಟ್ಟ ಸಮೀಪದ ನಾಣಚ್ಚಿ ಗೇಟ್‌ ಭಾಗ ಹಾಗೂ ಮೈಸೂರು ಜಿಲ್ಲೆಯ ವೀರನಹೊಸಹಳ್ಳಿ ವಲಯ ವ್ಯಾಪ್ತಿಯಲ್ಲಿರುವ ವೀರನಹೊಸಹಳ್ಳಿಯ ಸಫಾರಿಯನ್ನು ರದ್ದುಪಡಿಸಲಾಗಿದೆ. ಆದರೆ ಎಚ್‌ಡಿ ಕೋಟೆ ತಾಲ್ಲೂಕಿನ ದಮ್ಮನಕಟ್ಟೆ ಬಳಿ ಇರುವ ಕಾಕನಕೋಟೆ ಸಫಾರಿ ಕೇಂದ್ರದಲ್ಲಿ ಎಂದಿನಂತೆ ಸಫಾರಿಗಳು ಮುಂದುವರಿಯಲಿವೆ ಎಂದು ನಾಗರಹೊಳೆ ವಲಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅನನ್ಯಕುಮಾರ್‌ ಮಾಹಿತಿಯನ್ನು ನೀಡಿದ್ದಾರೆ

Published by HT Digital Content Services with permission from HT Kannada....