ಭಾರತ, ಏಪ್ರಿಲ್ 30 -- ಪಶ್ಚಿಮ ಬಂಗಾಳ: ಕೊಲ್ಕತ್ತಾದ ಫಾಲ್‌ಪಟ್ಟಿ ಮಚುವಾ ಬಳಿ ಹೋಟೆಲ್‌ವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಹಲವರು ಸಾವನ್ನಪ್ಪಿದ್ದಾರೆ.

ಮಂಗಳವಾರ ರಾತ್ರಿ 8.15ರ ಸುಮಾರಿಗೆ ಹೋಟೆಲ್ ರಿತುರಾಜ್ ಆವರಣದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಈ ಘಟನೆಯಲ್ಲಿ 15 ಮಂದಿ ಸಜೀವ ದಹನವಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಮೃತಪಟ್ಟವರ ಶವಗಳನ್ನು ಹೊರ ತೆಗೆಯಲಾಗಿದ್ದು, ಉಳಿದವರನ್ನು ರಕ್ಷಿಸಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ತಿಳಿಸಿದ್ದಾರೆ. ಬೆಂಕಿ ನಿಯಂತ್ರಣದಲ್ಲಿದ್ದು, ರಕ್ಷಣಾ ಕಾರ್ಯ ಇನ್ನೂ ಮುಂದುವರಿದಿದೆ ಎಂದು ಅವರ ಹೇಳಿಕೆ ನೀಡಿದ್ದಾರೆ.

ಘಟನೆ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ತನಿಖೆಗಾಗಿ ವಿಶೇಷ ತಂಡವನ್ನೂ ರಚಿಸಲಾಗಿದೆ ಎಂದು ಮನೋಜ್ ಕುಮಾರ್ ಹೇಳಿದ್ದಾಗಿ ಎಎನ್‌ಐ ವರದಿ ತಿಳಿಸಿದೆ.

ಈ ಅಗ್ನಿ ಅವಘಡಕ್ಕೆ ಕಾರಣ ಏನು ಎನ್ನುವುದು ಇನ್ನೂವರೆಗೂ ತಿಳಿದುಬಂದಿಲ್ಲ. ಈ ಅಗ್ನಿ ದುರಂತದಲ್ಲಿ ಮೃತಪಟ್ಟವರಲ್ಲಿ...