ಭಾರತ, ಮೇ 26 -- ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಮರುಆರಂಭಕ್ಕೆ ಕೆಲವೇ ದಿನಗಳು ಉಳಿದಿವೆ. ಒಂದೆಡೆ ಮಳೆಯ ಆತಂಕವಿದ್ದರೆ, ಮತ್ತೊಂದೆಡೆ ಕೋವಿಡ್‌ 19 ಮಹಾಮಾರಿ ಹರಡುತ್ತಿರುವ ಆತಂಕ ಕೂಡಾ ಶಿಕ್ಷಕರು, ಮಕ್ಕಳು ಹಾಗೂ ಪೋಷಕರಲ್ಲಿ ಹೆಚ್ಚಾಗಿದೆ. ಈ ನಡುವೆ ಕರ್ನಾಟಕ ಅಸೋಸಿಯೇಟೆಡ್ ಸ್ಕೂಲ್ಸ್ ಮ್ಯಾನೇಜ್ಮೆಂಟ್ಸ್ (KAMS) ಸಲಹೆ ಸೂಚನೆಗಳ ಹೊಸ ಸುತ್ತೋಲೆ ಹೊರಡಿಸಿದೆ. ಎಲ್ಲಾ ಖಾಸಗಿ ಶಿಕ್ಷಣ ಸಂಸ್ಥೆಗಳು ಕೋವಿಡ್ -19 ರೂಪಾಂತರ ಮತ್ತು ಇತರ ವೈರಲ್ ಸೋಂಕುಗಳ ಬಗ್ಗೆ ಜಾಗರೂಕರಾಗಿರಲು ತಿಳಿಸಿದೆ.

ರಾಜ್ಯದಲ್ಲಿ ಭಾನುವಾರ (ಮೇ 25) 9 ಕೋವಿಡ್‌ ಕೇಸ್‌ಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 100ರ ಸಮೀಪ ಬಂದಿದೆ. ಇದರ ನಡುವೆ ಶನಿವಾರ ನಗರದಲ್ಲಿ ಕೋವಿಡ್ -19 ಕಾರಣದಿಂದಾಗಿ ಒಬ್ಬರು ಸಾವನ್ನಪ್ಪಿದ್ದಾರೆ. ಹೀಗಾಗಿ ಖಾಸಗಿ ಶಾಲೆಗಳ ಸಂಘವು ಹೊಸ ಎಸ್‌ಒಪಿ (ಪ್ರಮಾಣಿತ ಕಾರ್ಯಾಚರಣೆ ವಿಧಾನ) ಬಿಡುಗಡೆ ಮಾಡಿದೆ.

ಕೋವಿಡ್‌ ವಿಷಯದಲ್ಲಿ ಭಯಪಡುವ ಅಗತ್ಯವಿಲ್ಲ. ಆದರೂ ಶಿಕ್ಷಣ ಸಂಸ್ಥೆಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ನ...