ಭಾರತ, ಏಪ್ರಿಲ್ 23 -- ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ಮಂಗಳವಾರ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಕನಿಷ್ಠ 24 ಜನರನ್ನು ಸಾವನ್ನಪ್ಪಿದ್ದಾರೆ. ಈ ಕೃತ್ಯದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ದಾಳಿ ಹಿಂದಿರುವವರನ್ನು ಹುಟ್ಟಡಗಿಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಳ್ಳುತ್ತಿದ್ದಾರೆ. ಈ ನಡುವೆ ಸಿನಿಮಾ ಸೆಲೆಬ್ರಿಟಿಗಳೂ ಸಹ ಸಾವನ್ನಪ್ಪಿದವರ ಕುಟುಂಬಕ್ಕೆ ಸಂತಾಪ ರವಾನಿಸಿದ್ದಾರೆ. ತ್ವರಿತ ಕ್ರಮಕ್ಕೆ ಮುಂದಾಗಿ ಎಂದು ಪ್ರಧಾನಿ ಮೋದಿ ಬಳಿ ವಿನಂತಿಸಿದ್ದಾರೆ.
ಈ ಬಗ್ಗೆ ನಟ ಶಿವರಾಜ್ಕುಮಾರ್ ಸಹ ಪೋಸ್ಟ್ ಹಂಚಿಕೊಂಡಿದ್ದಾರೆ. "ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನ ತೀವ್ರವಾಗಿ ಖಂಡಿಸುತ್ತೇನೆ. ಶಾಂತಿ ಸೌಹಾರ್ದದ ಭಾರತದಲ್ಲಿ ಇಂತಹ ಕೃತ್ಯಗಳು ಮರುಕಳಿಸದಿರಲಿ. ಹಾಗೆಯೇ ಈ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಲಿ ಮತ್ತು ನಮ್ಮನ್ನು ಅಗಲಿದ ಎಲ್ಲಾ ಭಾರತೀಯರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕೋರುತ್ತಾ ಎಲ್ಲಾ ಕುಟುಂಬಸ್ಥರ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.