ಭಾರತ, ಮೇ 4 -- ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭರ್ಜರಿ ಜಯ ಸಾಧಿಸಿತು. ಕೊನೆಯ ಎಸೆತದವರೆಗೂ ರೋಚಕವಾಗಿ ಸಾಗಿದ ಪಂದ್ಯದಲ್ಲಿ ಆರ್‌ಸಿಬಿ ತಂಡದ ಸಾಂಘಿಕ ಹೋರಾಟಕ್ಕೆ ಜಯ ಒಲಿದು ಬಂತು. ಪಂದ್ಯದಲ್ಲಿ ಆರ್‌ಸಿಬಿ ತಂಡದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಆಟ ಗಮನ ಸೆಳೆಯಿತು. ಬೌಂಡರಿ ಸಿಕ್ಸರ್‌ಗಳ ಸುರಿಮಳೆಯೊಂದಿಗೆ ಅಭಿಮಾನಿಗಳಿಗೆ ಮನರಂಜನೆ ಉಣಬಡಿಸಿದರು. ಈ ನಡುವೆ ಖಲೀಲ್ ಅಹ್ಮದ್‌ ಎಸೆತದಲ್ಲಿ ಬ್ಯಾಕ್‌ ಟು ಬ್ಯಾಕ್‌ ಸಿಕ್ಸರ್‌ ಸಿಡಿಸಿ ಗಮನ ಸೆಳೆದರು. ಆರ್‌ಸಿಬಿ ಇನ್ನಿಂಗ್ಸ್‌ನ ಮೂರನೇ ಓವರ್‌ನಲ್ಲಿ ಸತತ ಸಿಕ್ಸರ್‌ಗಳನ್ನು ಬಾರಿಸಿದರು. ಇದು ಅಭಿಮಾನಿಗಳಿಗೆ ಖುಷಿ ತಂದಿದೆ. ಆ ಮೂಲಕ ಉಭಯ ಆಟಗಾರರ ನಡುವಿನ ಕೊನೆಯ ಮುಖಾಮುಖಿಯನ್ನು ಉಲ್ಲೇಖಿಸುವ ಮೂಲಕ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ಗಳು ಹರಿದಾಡುತ್ತಿವೆ.

ಏಪ್ರಿಲ್‌ನಲ್ಲಿ ಚೆನ್ನೈನಲ್ಲಿ ಉಭಯ ತಂಡಗಳ ನಡುವಿನ ಸೀಸನ್‌ನ ಮೊದಲ ಪಂದ್ಯ ನಡೆದಿತ್ತು. ಆಗ ಪಂದ್ಯದ ನಂತರ ಕೊಹ್ಲಿ ಮತ್ತು ಖಲೀಲ್ ನಡುವೆ ಮಾತುಕತೆ ನಡೆದಿತ್...