Bangalore, ಮೇ 24 -- ದಕ್ಷಿಣ ಭಾರತದ ಮೂರು ರಾಜ್ಯಗಳಲ್ಲಿ ಮೇ 25 ರವರೆಗೆ ವಾರ್ಷಿಕ ಆನೆ ಗಣತಿ ಕಾರ್ಯವನ್ನು ಸಂಘಟಿಸುವ ಮತ್ತು ನಡೆಸುವ ಕಾರ್ಯದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಸತತ ಎರಡನೇ ವರ್ಷವೂ ಮುಂಚೂಣಿಯಲ್ಲಿದ್ದು. ನಾಗರಹೊಳೆ ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಆನೆ ಗಣತಿ ನಡೆದಿದೆ.

ಹಿಂದಿನ ವರ್ಷದಂತೆ ಈ ಬಾರಿಯೂ ಮೈಸೂರು ಆನೆ ಮೀಸಲು ಪ್ರದೇಶದ ಜತೆಗೆ, 10 ಗಡಿ ಅರಣ್ಯ ವಿಭಾಗಗಳಲ್ಲಿ ಮೌಲ್ಯಮಾಪನ ನಡೆಯುತ್ತಿದೆ., ಕರ್ನಾಟಕದ ಕಾಫಿ ಎಸ್ಟೇಟ್‌ಗಳಾದ ಕೊಡಗು ಹಾಸನ ಮತ್ತು ಚಿಕ್ಕಮಗಳೂರಿನಲ್ಲಿ ವಾಸಿಸುವ ಆನೆಗಳನ್ನು ಸಹ ಗಣತಿ ಕಾರ್ಯದಲ್ಲಿ ಪರಿಗಣಿಸಲಾಗುತ್ತಿದ್ದು,. ಅರಣ್ಯ ಪ್ರದೇಶದಲ್ಲಿ ಆನೆಗಳು ಹೆಜ್ಜೆಗಳ ಮಾಹಿತಿ ಕಲೆ ಹಾಕಲಾಗುತ್ತಿದೆ.

ಭಾರತೀಯ ವನ್ಯಜೀವಿ ಸಂಸ್ಥೆ ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ನಿಗದಿಪಡಿಸಿದ ಸ್ವರೂಪವನ್ನು ಮೌಲ್ಯಮಾಪನಕ್ಕಾಗಿ ಬಳಸಲಾಗುತ್ತದೆ. ಗಣತಿಯಲ್ಲಿ ಎರಡು ವಿಧಾನ. ಒಂದು ನೇರ ಎಣಿಕೆ, ಲದ್ದಿ ವಿಶ್ಲೇಷಣೆ ಮತ್ತು ಆನೆ ಪ್ರೊಫೈಲಿಂಗ್ ಪರೋಕ್ಷ ವಿಧಾನವಾಗಿವೆ....