ಭಾರತ, ಮೇ 8 -- ಬೆಂಗಳೂರು: ಒಂದೂವರೆ ದಶಕದ ಹಿಂದೆ ಓಬಳಾಪುರಂ ಗಣಿಗಾರಿಕೆ ಪ್ರಕರಣದಲ್ಲಿ ಸಿಲುಕಿ ಸದ್ಯ ಏಳು ವರ್ಷದ ಶಿಕ್ಷೆ ವಿಧಿಸಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭಾ ಕ್ಷೇತ್ರದ ಸದಸ್ಯರು ಆಗಿರುವ ಮಾಜ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಶಾಸಕತ್ವ ರದ್ದಾಗಿದೆ. ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿಯಾಗಿರುವ ಎಂ.ಕೆ.ವಿಶಾಲಾಕ್ಷಿ ಅವರು ಗುರುವಾರ ಹೊರಡಿಸಿರುವ ಆದೇಶದಂತೆ ಜನಾರ್ದನ ರೆಡ್ಡಿ ಅವರ ಶಾಸಕತ್ವವನ್ನು ರದ್ದು ಮಾಡಲಾಗಿದೆ. ಅಲ್ಲದೇ ಗಂಗಾವತಿ ವಿಧಾನಸಭಾ ಕ್ಷೇತ್ರವು ಖಾಲಿ ಉಳಿದಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನ್ಯಾಯಾಲಯ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ಸಿಕ್ಕರೆ ಮಾತ್ರ ಜನಾರ್ದನ ರೆಡ್ಡಿ ಅವರ ಶಾಸಕತ್ವ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ

Published by HT Digital Content Services with permission from HT Kannada....