Mangalore, ಮೇ 22 -- ಮಂಗಳೂರು:ಜನರಿಗೆ ಎಷ್ಟು ಬುದ್ದಿ ಹೇಳಿದರೂ ಕೇಳೋದಿಲ್ಲ. ದಂಡ ವಿಧಿಸಿದರೂ ಜನರ ಮಾತ್ರ ತಪ್ಪು ಮಾಡೋದು ಬಿಡೋದಿಲ್ಲ.ವನ್ಯಜೀವಿಗಳು ಇರುವಾಗ ಹುಷಾರು. ಯಾವುದೇ ಕಾರಣಕ್ಕೂ ಅವುಗಳ ಬಳಿ ಹೋಗಬೇಡಿ. ಸೆಲ್ಫಿ ಹುಚ್ಚು ಸಾಹಸಕ್ಕೆ ಹೋಗಬೇಡಿ ಎಂದು ಹೇಳಿದರೂ ಹುಚ್ಚು ಸಾಹಸ ಮಾಡುತ್ತಲೇ ಇರುತ್ತಾರೆ. ಇಂತಹುದೇ ಘಟನೆ ಈಗ ಮಲೆನಾಡಿನ ಘಟ್ಟ ಪ್ರದೇಶದಲ್ಲಿ ನಡೆದಿದೆ.ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ನಾಲ್ಕನೇ ತಿರುವಿನಲ್ಲಿ ಹೆದ್ದಾರಿ ಮಧ್ಯೆ ಒಂಟಿ ಸಲಗ ಕಂಡು ಬಂದಿದೆ. ರಸ್ತೆಯಲ್ಲೇ ನಿಂತಿದ್ದ ಒಂಟಿ ಸಲಗವನ್ನು ನೋಡಿ, ಕೆಲ ಪ್ರವಾಸಿಗರು ಸೆಲ್ಫಿ ತೆಗೆಯುವ ಉದ್ದೇಶದಿಂದ ಅದರ ಸಮೀಪದವರೆಗೆ ತೆರಳಿದರು. ಈ ವೇಳೆ ಸಲಗ ರೋಷವನ್ನು ವ್ಯಕ್ತಪಡಿಸಿತು.

ಇದರಿಂದ ಅನೇಕ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿ, ವಾಹನಗಳ ಸಂಚಾರ ಸ್ಥಗಿತಗೊಂಡಿತು.ಕಾಡಾನೆ ಯಾವುದೇ ರೀತಿಯ ಹಾನಿ ಉಂಟು ಮಾಡಿಲ್ಲ. ಪರಿಸರ ತಜ್ಞರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಪ್ರವಾಸಿಗರ ಈ ನಡೆಯನ್ನು ತೀವ್ರವಾ...