Bangalore, ಮೇ 22 -- ಬೆಂಗಳೂರು: ಕರ್ನಾಟಕದ ಪ್ರಮುಖ ಜಿಲ್ಲೆಗಳಲ್ಲಿ ಪ್ರವಾಸೋದ್ಯಮದ ಜತೆಗೆ ವಾಣಿಜ್ಯ ಚಟುವಟಿಕೆಗಳಿಗೂ ಉತ್ತೇಜನ ನೀಡಬಹುದಾದ ಗಿರಿ ಶಿಖರಗಳ ಜಿಲ್ಲೆಗಳಾದ ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ವಿಮಾನಯಾನ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಎರಡೂ ಜಿಲ್ಲೆಗಳಲ್ಲಿ ಏರ್‌ಸ್ಟ್ರಿಪ್‌ ನಿರ್ಮಾಣ ಯೋಜನೆ ಚರ್ಚೆಯ ಹಂತದಲ್ಲಿದೆ. ಭೂಸ್ವಾಧೀನ ಸೇರಿದಂತೆ ಹಲವು ಚಟುವಟಿಕೆಗಳನ್ನು ಕರ್ನಾಟಕ ಮೂಲಸೌಕರ್ಯ ಇಲಾಖೆಯಿಂದ ಕೈಗೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಬಜೆಟ್‌ನಲ್ಲಿ ಘೋಷಿಸಿದ್ದ ಏರ್‌ಸ್ಟ್ರಿಪ್‌ ಯೋಜನೆಯನ್ನು ಜಾರಿಗೊಳಿಸುವ ಪ್ರಯತ್ನಕ್ಕೆ ಮತ್ತೆ ಬಲ ಸಿಕ್ಕಿದೆ. ಚಿಕ್ಕಮಗಳೂರು ಏರ್‌ಸ್ಟ್ರಿಪ್‌ ಯೋಜನೆಗೆ ಸಂಬಂಧಿಸಿದಂತೆ ಸಚಿವರಾದ ಎಂ.ಬಿ.ಪಾಟೀಲ ಹಾಗೂ ಕೆ.ಜೆ.ಜಾರ್ಜ್‌ ಅವರು ಗುರುವಾರ ಸಭೆಯನ್ನು ನಡೆಸಿದರು. ಯೋಜನೆಗೆ ಸಂಬಂಧಿಸಿ ವಿವರಗಳನ್ನು ಪಡೆದುಕೊಂಡು ಚಿಕ್ಕಮಗಳೂರು ಏರ್‌ ಸ್ಟ್ರಿಪ್‌ ಯೋಜನೆಯ ಕಡತವನ್ನು ಸಂಪುಟದ ಮುಂದೆ ಮಂಡಿಸುವಂತೆ ಸೂಚನೆ ನೀಡಿದರು.

ಪ್ರವಾಸೋದ್ಯಮ ಮತ್ತು ವಾಣಿಜ್ಯ ವ್ಯವಹಾರಗಳಿಗೆ ಉತ್ತೇಜನ ನ...