Chitradurga, ಮಾರ್ಚ್ 14 -- ಚಿತ್ರದುರ್ಗ: ವಿಧಾನಸಭೆಯ ಉಪಾಧ್ಯಕ್ಷ ಹಾಗೂ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಅವರು ಬೆಂಗಳೂರು ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಲ್ಲಿ ಅಧಿವೇಶನ ಮುಗಿಸಿ ರಾಣೆಬೆನ್ನೂರಿಗೆ ವಾಪಸಾಗುವಾಗ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಬಳಿ ಸಂಭವಿಸಿದ ಅಪಘಾತದಲ್ಲಿ ಶುಕ್ರವಾರ ಸಂಜೆ ಗಾಯಗೊಂಡಿದ್ದು ಕೂಡಲೇ ಅವರಿಗೆ ಚಿಕಿತ್ಸೆ ಕೊಡಿಸಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.ಪಾರಾಗಿದ್ದಾರೆ. ತಲೆ, ಕಾಲು ಹಾಗೂ ಎದೆ ಭಾಗಕ್ಕೆ ಏಟು ಬಿದ್ದು ರಕ್ತಸ್ರಾವವಾಗಿದ್ದರಿಂದ ಕೂಡಲೇ ಚಿತ್ರದುರ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ದಾವಣಗೆರೆಯಲ್ಲಿರುವ ಶಾಮನೂರು ಶಿವಶಂಕರಪ್ಪ ಅವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ನೀಡಿರುವ ಪ್ರಕಾರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಆತಂಕ ಪಡುವ ಸನ್ನಿವೇಶ ಇಲ್ಲ ಎಂದು ಖಚಿತಪಡಿಸಿದ್ದಾರೆ.

ರುದ್ರಪ್ಪ ಲಮಾಣಿ ಅವರು ಹಾವೇರಿ ಕ್ಷೇತ್ರದ ಶಾಸಕರಾಗಿದ್ದರ...