Bengaluru, ಏಪ್ರಿಲ್ 28 -- ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣ ಮತ್ತಷ್ಟು ಜಟಿಲವಾಗುತ್ತಿದೆ. ನಟಿ ರನ್ಯಾ ರಾವ್‌ ಮಾತ್ರವಲ್ಲದೆ ಇತರರೂ ಚಿನ್ನ ಕಳ್ಳ ಸಾಗಣೆಯಲ್ಲಿ ತೊಡಗಿರುವ ಮಾಹಿತಿ ಲಭ್ಯವಾಗುತ್ತಿದೆ. ಕಳ್ಳ ಸಾಗಣೆ ಮಾಡುವವರು ಆಫ್ರಿಕಾ ದೇಶಗಳಿಂದ ದುಬೈ ಮೂಲಕ ಭಾರತಕ್ಕೆ ಕಳ್ಳಸಾಗಣೆ ಮಾಡಿರುವ ಶಂಕೆ ಉಂಟಾಗಿದೆ. ರನ್ಯಾ ರಾವ್‌ ಮಾದರಿಯಲ್ಲೇ ಚಿನ್ನ ಕಳ್ಳ ಸಾಗಣೆ ಮಾಡಲು ಯತ್ನಿಸಿದ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಜಾಂಬಿಯಾ ದೇಶದಿಂದ ದುಬೈ ಮೂಲಕ ಬೆಂಗಳೂರಿಗೆ 7 ಕೆ.ಜಿ. ಚಿನ್ನ ಕಳ್ಳಸಾಗಣೆ ಮಾಡಲು ಯತ್ನಿಸಿದ್ದ ಭಾರತೀಯ ಮೂಲದ ವ್ಯಕ್ತಿಯೊಬ್ಬನನ್ನು, ಜಾಂಬಿಯಾ ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ವಿನಿಮಯ ಮಾಡಿಕೊಳ್ಳುವಂತೆ ಇಂಟರ್‌ ಪೋಲ್‌ಗೆ ಸಿಬಿಐ ಪತ್ರ ಬರೆದಿದೆ.

ಜಾಂಬಿಯಾದ ರಾಜಧಾನಿ ಲೂಸಾಕದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೇ ಏಪ್ರಿಲ್‌ 19ರಂದು 27 ವರ್ಷದ ಭಾರತೀಯನನ್ನು ಅಲ್ಲಿನ ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ...