ಭಾರತ, ಮೇ 22 -- ಬಸ್ತರ್ (ಛತ್ತೀಸ್ಗಡ): ಬಸ್ತರ್ನ ಅಬೂಜ ಮಾಢ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಬುಧವಾರ (ಮೇ 21) ಪ್ರಮುಖ ನಕ್ಸಲ್ ನಾಯಕ ಬಸವರಾಜು ಅಲಿಯಾಸ್ ನಂಬಾಲಾ ಕೇಶವ್ ರಾವ್ (70) ಸೇರಿ 27 ನಕ್ಸಲರು ಹತರಾಗಿದ್ದಾರೆ. ಈ ಕಾರ್ಯಾಚರಣೆ ವೇಳೆ ಒಬ್ಬ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿರುವುದಾಗಿ ಛತ್ತೀಸ್ಗಡ ಗೃಹ ಸಚಿವ ವಿಜಯ್ ಶರ್ಮಾ ತಿಳಿಸಿದ್ದಾರೆ. ನಕ್ಸಲ್ ಶೋಧ ಮತ್ತು ನಕ್ಸಲ್ ನಿಗ್ರಹ ಕಾರ್ಯಾಚರಣೆ ಮುಂದುವರಿದಿದೆ ಎಂದು ಶರ್ಮಾ ಸುದ್ದಿಗಾರರಿಗೆ ತಿಳಿಸಿದರು.
ಛತ್ತೀಸಗಢದ ನಾರಾಯಣಪುರ-ಬಿಜಾಪುರ-ದಂತೆವಾಡಾ ಜಿಲ್ಲೆಗಳಲ್ಲಿ ಹಬ್ಬಿಕೊಂಡಿರುವ ಅಬೂಜ ಮಾಢ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಳೆದ 2 ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದವು.
ಬಸವರಾಜು ಸಿಪಿಐ (ಮಾವೋವಾದಿ) ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಬಸವರಾಜು ಅವರ ಹತ್ಯೆಯು ಭದ್ರತಾ ಪಡೆಗಳಿಗೆ ದೊರಕಿದ ಗೆಲುವು ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, 'ಇದೊಂದು ಐತಿಹಾಸಿಕ ಸಾಧನೆ' ಎಂದು ಬಣ್ಣಿಸಿದ್ದಾ...
Click here to read full article from source
To read the full article or to get the complete feed from this publication, please
Contact Us.