ಭಾರತ, ಮೇ 22 -- ಬಸ್ತರ್ (ಛತ್ತೀಸ್‌ಗಡ): ಬಸ್ತರ್‌ನ ಅಬೂಜ ಮಾಢ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಬುಧವಾರ (ಮೇ 21) ಪ್ರಮುಖ ನಕ್ಸಲ್ ನಾಯಕ ಬಸವರಾಜು ಅಲಿಯಾಸ್ ನಂಬಾಲಾ ಕೇಶವ್‌ ರಾವ್‌ (70) ಸೇರಿ 27 ನಕ್ಸಲರು ಹತರಾಗಿದ್ದಾರೆ. ಈ ಕಾರ್ಯಾಚರಣೆ ವೇಳೆ ಒಬ್ಬ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿರುವುದಾಗಿ ಛತ್ತೀಸ್‌ಗಡ ಗೃಹ ಸಚಿವ ವಿಜಯ್ ಶರ್ಮಾ ತಿಳಿಸಿದ್ದಾರೆ. ನಕ್ಸಲ್ ಶೋಧ ಮತ್ತು ನಕ್ಸಲ್ ನಿಗ್ರಹ ಕಾರ್ಯಾಚರಣೆ ಮುಂದುವರಿದಿದೆ ಎಂದು ಶರ್ಮಾ ಸುದ್ದಿಗಾರರಿಗೆ ತಿಳಿಸಿದರು.

ಛತ್ತೀಸಗಢದ ನಾರಾಯಣಪುರ-ಬಿಜಾಪುರ-ದಂತೆವಾಡಾ ಜಿಲ್ಲೆಗಳಲ್ಲಿ ಹಬ್ಬಿಕೊಂಡಿರುವ ಅಬೂಜ ಮಾಢ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಳೆದ 2 ದಿನಗಳಿಂದ ಕಾರ್ಯಾಚರಣೆ ನಡೆಸುತ್ತಿದ್ದವು.

ಬಸವರಾಜು ಸಿಪಿಐ (ಮಾವೋವಾದಿ) ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಬಸವರಾಜು ಅವರ ಹತ್ಯೆಯು ಭದ್ರತಾ ಪಡೆಗಳಿಗೆ ದೊರಕಿದ ಗೆಲುವು ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, 'ಇದೊಂದು ಐತಿಹಾಸಿಕ ಸಾಧನೆ' ಎಂದು ಬಣ್ಣಿಸಿದ್ದಾ...