Bengaluru, ಏಪ್ರಿಲ್ 27 -- ಬೆಂಗಳೂರು: ರಾಜ್ಯದ ಕೆಲವೆಡೆ ಸಿಇಟಿ ಪರೀಕ್ಷೆಗಳು ನಡೆಯುತ್ತಿದ್ದ ಸಂದರ್ಭ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಯಲು ಹೇಳಿದ ಹಾಗೂ ಅದನ್ನು ತುಂಡುಮಾಡಿದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವೆಡೆ ಬ್ರಾಹ್ಮಣ ಮತ್ತು ಬೆಂಬಲಿತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವಂತೆಯೇ ಈ ಪ್ರಕರಣ, ಹೈಕೋರ್ಟ್ ಮೆಟ್ಟಲೇರಿತ್ತು. ಇದೀಗ ರಾಜ್ಯ ಸರಕಾರಕ್ಕೆ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ಗೆ ಹೈಕೋರ್ಟ್ ನೋಟಿಸ್ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ ಒಳಗೊಂಡ ದ್ವಿಸದಸ್ಯ ವಿಭಾಗೀಯ ಪೀಠ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಈ ನೋಟಿಸ್ ನೀಡಿದೆ.
ಪದಾಂಕಿತ ಹಿರಿಯ ನ್ಯಾಯವಾದಿ ಶ್ರೀರಂಗ ಎಸ್ ನೇತೃತ್ವದಲ್ಲಿ ನ್ಯಾಯವಾದಿಗಳಾದ ಸುಮನಾ ನಾಗಾನಂದ್ ಮತ್ತು ಅಶ್ವಿನಿ ಎನ್. ರವೀಂದ್ರ ಒಳಗೊಂಡ ತಂಡ ಶಿವಮೊಗ್ಗ, ಬೀದರ್, ಧಾರವಾಡಗಳಲ್ಲಿ ಸಿಇಟಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ವಿಚಾರದ ಕುರಿತು ಮಹ...
Click here to read full article from source
To read the full article or to get the complete feed from this publication, please
Contact Us.