Bengaluru, ಮೇ 10 -- ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿ ಗಣತಿ) ಕುರಿತು ಅಭಿಪ್ರಾಯ ನೀಡಲು ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿದ್ದರಿಂದ ಶುಕ್ರವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳದೆ ಚರ್ಚೆಯನ್ನು ಮುಂದೂಡಿದೆ. ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಈ ಸಮೀಕ್ಷೆಯ ವರದಿಯನ್ನು 2024ರ ಫೆಬ್ರವರಿಯಲ್ಲಿ ಸರಕಾರಕ್ಕೆ ಸಲ್ಲಿಸಲಾಗಿತ್ತು. ಈ ವರ್ಷದ ಏಪ್ರಿಲ್‌ 11 ರಂದು ನಡೆದ ಸಚಿವ ಸಂಪುಟದಲ್ಲಿ ಮೊದಲ ಬಾರಿಗೆ ಮಂಡಿಸಲಾಗಿತ್ತು. ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳಿಂದ ಪ್ರಬಲ ವಿರೋಧ ಕೇಳಿಬಂದಿದ್ದರಿಂದ ಯಾವುದೇ ತೀರ್ಮಾನ ತೆಗೆದುಕೊಳ್ಳಲಾಗದೆ ಮುಂದಿನ ಸಂಪುಟ ಸಭೆಯ ವೇಳೆಗೆ ಎಲ್ಲ ಸಚಿವರು ಅಭಿಪ್ರಾಯ ನೀಡುವಂತೆ ಕೋರಲಾಗಿತ್ತು.

ಬಲ್ಲ ಮೂಲಗಳ ಪ್ರಕಾರ 33 ಸಚಿವರ ಪೈಕಿ ಕೇವಲ 11 ಸಚಿವರು ಮಾತ್ರ ತಮ್ಮ ಅಭಿಪ್ರಾಯಗಳನ್ನು ಸಭೆಯಲ್ಲಿ ಮಂಡಿಸಿದ್ದಾರೆ. ಉಳಿದ ಸಚಿವರು ಮತ್ತಷ್ಟು ಕಾಲಾವಕಾಶ ಕೋರಿದ್ದಾರೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಿವಾರ್ಯವಾಗಿ ಜ...