Bangalore, ಮೇ 1 -- ಕರ್ನಾಟಕದಲ್ಲಿ ಜಾತಿ ಗಣತಿಯ ವಿವಾದ ಇನ್ನೂ ಮುಂದುವರಿದಿರುವ ನಡುವೆಯೇ ಕೇಂದ್ರ ಸರ್ಕಾರವೂ ಕರ್ನಾಟಕದ ಹಾದಿಯನ್ನೇ ಹಿಡಿದಿದೆ.ಕೇಂದ್ರ ಸರ್ಕಾರವೂ ಜನಗಣತಿಯ ಜತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವುದಾಗಿ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಈ ಕುರಿತು ತೀರ್ಮಾನವನ್ನು ಪ್ರಕಟಿಸಿದೆ. ಗಣತಿ ಹೇಗಿರಲಿದೆ ಎನ್ನುವ ಕುರಿತು ಇನ್ನಷ್ಟೇ ತಿಳಿಯಬೇಕಿದೆ. ಆದರೆ ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಜನ ಹಾಗೂ ಜಾತಿ ಗಣತಿಯನ್ನು ಕರ್ನಾಟಕದ ಮುಖ್ಯಮಂತ್ರಿ ಹಾಗೂ ಕಳೆದ ಎರಡು ದಶಕದಿಂದಲೂ ಈ ನಿಟ್ಟಿನಲ್ಲಿ ಗಟ್ಟಿ ನಿಲುವು ತೋರಿತ್ತಿರುವ ಹಿರಿಯ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದು. ಇದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಆಗಲಿ ಎಂದು ಸಲಹೆ ನೀಡಿದ್ದಾರೆ.
ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಆಧಾರಿತ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಒಂದು ಪರಿಪೂರ್ಣ ಮಾದರಿಯಾಗಿದ್ದು ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಯಾವುದೇ ಸಲಹೆ-ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧ ಇದೆ ಎಂದ...
Click here to read full article from source
To read the full article or to get the complete feed from this publication, please
Contact Us.