Bengaluru, ಮೇ 3 -- ಮಂಗಳೂರು: ಪೊಲೀಸ್ ತನಿಖೆಗೆ ಮುನ್ನವೇ ಸ್ಪೀಕರ್ ಯು.ಟಿ ಖಾದರ್ ಇದೀಗ ಪ್ರಧಾನ ಸೂತ್ರದಾರ ಸಹೋದರನೊಂದಿಗೆ ಮಾತನಾಡಿ, ಕುಟುಂಬಕ್ಕೆ ಕ್ಲೀನ್ ಚಿಟ್ ನೀಡಿದ್ದು ತನಿಖೆಯ ಹಾದಿ ತಪ್ಪಿಸುವ ಕೆಲಸ ಮಾಡಿದ್ದು, ತಕ್ಷಣ ರಾಜೀನಾಮೆ ನೀಡಬೇಕು. ಈ ಮೂಲಕ ಸ್ಪೀಕರ್ ಕುರ್ಚಿಯ ಗೌರವ ಉಳಿಸುವ ಕೆಲಸ ಮಾಡಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಆಗ್ರಹಿಸಿದ್ದಾರೆ. ಇತ್ತ ತನಿಖೆಯ ವರದಿಯಲ್ಲಿ ಫಾಜಲ್ ಸಹೋದರ ಕೂಡ ಭಾಗಿಯಾಗಿದ್ದಾನೆ ಎಂದು ಗೃಹ ಮಂತ್ರಿಗಳು ಮತ್ತು ಪೊಲೀಸ್ ಆಯುಕ್ತರು ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.

ಫಾಝಿಲ್ ಮನೆಯವರು ಅಥವಾ ಕುಟುಂಬಸ್ಥರು ಯಾರೂ ಕೂಡ ಈ ಘಟನೆಯಲ್ಲಿ ಯಾವುದೇ ರೀತಿಯಲ್ಲಿ ಭಾಗಿಯಾಗಿಲ್ಲ ಅಂತ ಮಾಧ್ಯಮಕ್ಕೆ ಸ್ಪೀಕರ್ ಯು.ಟಿ ಖಾದರ್ ಹೇಳಿಕೆ ನೀಡಿದ್ದು ಹೇಗೆ? ಫಾಝಿಲ್ ಅವರ ಸಹೋದರ ಜತೆ ಮಾತಾಡಿದ್ದೇನೆ ಅಂತ ಸ್ವತಃ ಖಾದರ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ. ಪೊಲೀಸರ ವಶದಲ್ಲಿರುವಾಗ ಮಾತನಾಡಿದ್ದು ಹೇಗೆ, ಪೊಲೀಸರು ಆರೋಪಿಗಳ ಜತೆ ಮಾತನಾಡಲು ಅವಕಾಶ ಕಲ್ಪಿಸಿದ್ದು ಹೇಗೆ, ಆರೋಪಿಗಳನ್ನು ರಕ...