ಭಾರತ, ಏಪ್ರಿಲ್ 4 -- K Annamalai: ತಮಿಳುನಾಡು ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ತಮಿಳುನಾಡು ಬಿಜೆಪಿ ಘಟಕಕ್ಕೆ ಹೊಸ ಅಧ್ಯಕ್ಷರ ನೇಮಕವಾಗಬೇಕು. ಇದಕ್ಕಾಗಿ ತೆರೆಮರೆಯ ಕಸರತ್ತು ಶುರುವಾಗಿದೆ. ಈ ನಡುವೆ, ಎಐಎಡಿಎಂಕೆ ಜತೆಗೆ ಮೈತ್ರಿ ವಿಚಾರವೂ ಮುನ್ನೆಲೆಗೆ ಬಂದಿದ್ದು, ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಮುಂದುವರಿಯುತ್ತಾರಾ ಅಥವಾ ಇಲ್ಲವಾ ಎಂಬ ಪ್ರಶ್ನೆಯೂ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ, ಕೆ ಅಣ್ಣಾಮಲೈ ಸುದ್ದಿಗಾರರ ಜತೆಗೆ ಇದೇ ವಿಚಾರವಾಗಿ ಮಾತನಾಡಿದ್ದು, ಬಿಜೆಪಿಯಲ್ಲಿ ನಾವು ಪೈಪೋಟಿಗಿಳಿಯಲ್ಲ ಎಂದು ಹೇಳಿದ್ದಾರೆ. ಇನ್ನೇನು ಹೇಳಿದ್ರು ಅಂತ ತಿಳಿಯೋಣ.

ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಇಂದು (ಏಪ್ರಿಲ್ 4) ಸುದ್ದಿಗಾರರ ಜತೆಗೆ ಮಾತನಾಡುತ್ತ, ತಮಿಳುನಾಡು ಬಿಜೆಪಿಯಲ್ಲಿ ಯಾವುದೇ ಸ್ಪರ್ಧೆ ಇಲ್ಲ, ನಾವು ನಾಯಕನನ್ನು ಸರ್ವಾನುಮತದಿಂದ ಆಯ್ಕೆ ಮಾಡುತ್ತೇವೆ. ಆದರೆ ನಾನು ರೇಸ್‌ನಲ್ಲಿ ಇಲ್ಲ. ನಾನು ಬಿಜೆಪಿ ರಾಜ್ಯ ನಾಯಕತ್ವ ಓಟದಲ್ಲಿ ಇಲ್ಲ" ಎಂದು ಸ್ಪಷ್ಟಪಡಿಸಿದ್ದಾಗಿ ಎಎನ್‌ಐ ಸುದ್ದಿ ಮಾಡಿದೆ.

ತಮಿಳ...