Tumkur, ಮೇ 2 -- ತುಮಕೂರು: ದಶಕಗಳಿಂದಲೂ ಲಕ್ಷಾಂತರ ಮಕ್ಕಳಿಗೆ ಅಕ್ಷರ, ಅನ್ನ ದಾಸೋಹದ ಮೂಲಕ ಭಾರತದಲ್ಲೇ ವಿಶಿಷ್ಟ ಮಠ ಎನ್ನಿಸಿರುವ ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗೇಶ್ವರ ಅನಾಥಾಲಯದಲ್ಲಿ ಉಚಿತವಾಗಿ ಶಿಕ್ಷಣ ಪಡೆಯಲು ಬಯಸುವ ಮಕ್ಕಳಿಂದ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ 2025ರ ಮೇ 2ರಿಂದಲೇ ಶುರುವಾಗಿದೆ. ತುಮಕೂರಿನ ಶ್ರೀ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗೇಶ್ವರ ಅನಾಥಾಲಯದ ಪ್ರವೇಶ 2025ಕ್ಕೆ ಅರ್ಜಿ ನೀಡುವ ಪ್ರಕ್ರಿಯೆ ಮೇ2ರ ಶುಕ್ರವಾರದಿಂದ ಆರಂಭಗೊಂಡಿದೆ. ಮೇ 10 ರವರೆಗೆ ಅರ್ಜಿಗಳನ್ನು ತುಮಕೂರಿನ ಸಿದ್ದಗಂಗಾ ಮಠದಲ್ಲಿ ನೀಡಲಾಗುತ್ತದೆ. ಶ್ರೀ ಸಿದ್ದಲಿಂಗೇಶ್ವರ ಅನಾಥಾಲಯಕ್ಕೆ ಹೊಸದಾಗಿ ಮೂರನೇ ತರಗತಿಯಿಂದ ಎಂಟನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡ ಬಯಸುವ ಗ್ರಾಮಣ ಹಾಗೂ ನಗರ ಪ್ರದೇಶದ ಬಡ ಕುಟುಂದ ವಿದ್ಯಾರ್ಥಿಗಳು ಖುದ್ದಾಗಿ ಬಂದ ಮಠದ ಲೆಕ್ಕಪತ್ರ ವಿಭಾಗದಲ್ಲಿ ಅರ್ಜಿಯನ್ನು ಪಡೆಯುವುದು. ಪರಿಶಿಷ್ಟ ಜಾತಿ ಹಾಗು ಪರಿಶಿಷ್ಟ ಪಂಗಡದ ಮಕ್ಕಳಿಗೆ ಆದ್ಯತೆಯನ್ನು ನೀಡಲಾಗುತ್ತದೆ ಎಂದು ತುಮಕೂರು ಶ್ರೀ ಸ...