Bengaluru, ಏಪ್ರಿಲ್ 24 -- ಕರ್ನಾಟಕ ಹವಾಮಾನ: ಕರ್ನಾಟಕದಲ್ಲಿ ಇಂದು ಬಹುತೇಕ ಮಳೆಯ ವಾತಾವರಣ ಕಡಿಮೆಯಾಗಿದ್ದು, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಕರ್ನಾಟಕದ ದಕ್ಷಿಣ ಒಳನಾಡು ಪ್ರದೇಶದ ತುಮಕೂರು, ಹಾಸನ ಸೇರಿ ಒಟ್ಟು 5 ಜಿಲ್ಲೆಗಳಲ್ಲಿ ಮಾತ್ರವೇ ಹಗುರ ಅಥವಾ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಕೆಲವು ಕಡೆ ತಾಪಮಾನ ಹೆಚ್ಚಳವಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಹವಾಮಾನ ಕೇಂದ್ರದ ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ.
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲಿಇಂದು (ಏಪ್ರಿಲ್ 24) ಭಾಗಶಃ ಮೋಡ ಕವಿದ ವಾತಾವರಣ ಇರಬಹುದು. ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಶಿಯಸ್ಗೆ ಏರಿಕೆಯಾಗಬಹುದು. ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಶಿಯಸ್ ಇರಬಹುದು. ಬೆಂಗಳೂರು ನಗರದಲ್ಲಿ ನಿನ್ನೆ (ಏಪ್ರಿಲ್ 23) ಗರಿಷ್ಠ ತಾಪಮಾನ 34.4 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ತಾಪಮಾ 23.9 ಡಿಗ್ರಿ ಸೆಲ್ಶಿಯಸ್ ದಾಖಾಗಿತ್ತ...
Click here to read full article from source
To read the full article or to get the complete feed from this publication, please
Contact Us.