ಭಾರತ, ಫೆಬ್ರವರಿ 5 -- ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಕಮನೀಯ ಕ್ಷೇತ್ರ ಕ್ಯಾಮೇನಹಳ್ಳಿ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ರಥಸಪ್ತಮಿ ಅಂಗವಾಗಿ ಹಲವು ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಬುಧವಾರ (ಫೆ.5) ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನಡೆಯಿತು. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿ ಗ್ರಾಮದಲ್ಲಿ ಇತಿಹಾಸವುಳ್ಳ ಹನುಮ, ಭೀಮ, ಮಧ್ವ ಮೂರು ಅವತಾರದಲ್ಲಿ ನೆಲೆಸಿರುವ ಶ್ರೀ ಆಂಜನೇಯ ಸ್ವಾಮಿಗೆ ಪ್ರತಿ ವರ್ಷದಂತೆ ಈ ವರ್ಷವು ಕೂಡಾ ರಥಸಪ್ತಮಿ ದಿನದಂದು ಮಂಜಾನೆಯಿಂದಲೇ ಹಲವಾರು ಧಾರ್ಮಿಕ ಪೂಜಾ ಕಾರ್ಯಕ್ರಮ ಜರುಗಿದವು.

ಮಧ್ಯಾಹ್ನ 1.30ಕ್ಕೆ ಗರುಡ ಪಕ್ಷಿಯು ಬ್ರಹ್ಮರಥೋತ್ಸವ ಸುತ್ತ ಮೂರು ಬಾರಿ ಪ್ರದಕ್ಷಿಣೆ ಹಾಕಿದ ಬಳಿಕ ಗೃಹ ಸಚಿವ ಡಾ.ಜಿ.‌ ಪರಮೇಶ್ವರ್ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಿದರು.

ರಥಸಪ್ತಮಿ ಮುಂಜಾನೆಯಂದು ಆಂಜನೇಯ ಸ್ವಾಮಿಗೆ ನಿರ್ಮಾಲಯ ಪೂಜೆ, ಪಂಚಾಮೃತ ಅಭಿಷೇಕ, ದೇವರ ಪ್ರತಿಮೆಗೆ ವಿಶೇಷ ಹೂವಿನ ಅಲಂಕಾರ, ಅಭಿಜಿತ್ ಲಗ್ನದಲ್ಲಿ ಸ್ವ...