Mysuru, ಮೇ 8 -- ಮೈಸೂರು: ಪಹಲ್ಗಾಮ್ ಪ್ರಕರಣದ ಹಿನ್ನೆಲೆಯಲ್ಲಿ ತುರ್ತು ಸಂದರ್ಭ ಎದುರಾದಲ್ಲಿ ನಾಗರೀಕರ ರಕ್ಷಣೆ ಮಾಡುವ ಬಗ್ಗೆ ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ನಾಗರೀಕ ರಕ್ಷಣೆಯ ತುರ್ತು ಸಂದರ್ಭದಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಣೆ ಮಾಡಲು ಮೈಸೂರು ಜಿಲ್ಲೆಯಲ್ಲಿ ಸಮರ್ಥ ಅಧಿಕಾರಿಗಳ ನೇತೃತ್ವದಲ್ಲಿ ಅಗತ್ಯವಿರುವ ಎಲ್ಲಾ ಇಲಾಖೆಗಳನ್ನು ಒಳಗೊಂಡಂತೆ 12 ಸೇವಾ ತಂಡಗಳನ್ನು ಜಿಲ್ಲಾಡಳಿತದಿಂದ ರಚನೆ ಮಾಡಲಾಗಿದೆ.ಜಿಲ್ಲಾಡಳಿತದ ವತಿಯಿಂದ ಕಂಟ್ರೋಲ್ ರೂಂ ಅನ್ನು 24*7 ತೆರೆಯಲಾಗಿದ್ದು, ಅಲ್ಲಿಂದ ನಿರ್ದೇಶನಗಳನ್ನು ಸಂಬಂಧಪಟ್ಟ ಇಲಾಖೆಗಳಿಗೆ ತಲುಪಿಸಲಾಗುವುದು, ನಿರ್ದೇಶನಗಳನ್ನು ಕಡ್ಡಾಯವಾಗಿ ಅನುಸರಿಸಬೇಕೆಂದು ಎಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ವಿಪತ್ತು ಸಂದರ್ಭಗಳಲ್ಲಿ ನಾಗರೀಕರ ರಕ್ಷಣೆಯ ಬಗ್ಗೆ ಕೈಗೊಳ್ಳಬೇಕಾದ ಅಗತ್ಯ ಕಾರ್ಯಗಳ ಸಿದ್ದತೆ ಗಳ ಕುರಿತಂತೆ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಅಪರ ಜಿಲ್ಲಾಧಿಕ...