Mangaluru, ಮಾರ್ಚ್ 15 -- Dr Vamana Nandavara Death: ಹಿರಿಯ ವಿದ್ವಾಂಸ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ. ವಾಮನ ನಂದಾವರ ಇನ್ನಿಲ್ಲ. 81ರ ಹರೆಯದ ಅವರು ಶನಿವಾರ ಬೆಳಗ್ಗೆ ಮಂಗಳೂರಿನಲ್ಲಿ ನಿಧನ ಹೊಂದಿದರು. ಕಳೆದ ಕೆಲ ವರ್ಷಗಳಿಂದ ಅವರು ಅನಾರೋಗ್ಯಪೀಡಿತರಾಗಿದ್ದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರದವರಾದ ಇವರು, ಕನ್ನಡ ಹಾಗೂ ತುಳು ಭಾಷಾ ವಿದ್ವಾಂಸರಾಗಿದ್ದರು.

ಆಕೃತಿ ಪ್ರಕಾಶನದ ಪ್ರಕಾಶಕ ಕಲ್ಲೂರು ನಾಗೇಶ್ ಅವರು ಡಾ ನಂದಾವರ ಅವರ ನಿಧನವನ್ನು ಖಚಿತಪಡಿಸಿದ್ದು, "ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರು, ಹೆಸರಾಂತ ಜಾನಪದ ವಿದ್ವಾಂಸರು, ಹಲವಾರು ಪುಸ್ತಕಗಳನ್ನು ಬರೆದ ಹೆಸರಾಂತ ಲೇಖರಾಗಿ ಜನಪ್ರೀತಿಗಳಿಸಿದ, ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು, ಕಲಾವಿದರನ್ನು ರೂಪಿಸಿದ ತುಳು ಕನ್ನಡ ವಿದ್ವಾಂಸರಾದ ಡಾ ವಾಮನ ನಂದಾವರ ಅವರು ಇಂದು 15/3/2025 ಬೆಳಗ್ಗೆ 8.30 ಕ್ಕೆ ನಿಧನರಾಗಿದ್ದಾರೆಂದು ತಿಳಿಸಲು ವಿಷಾದಿಸುತ್ತೇವೆ. ಇಂದು ಮಧ್ಯಾಹ್...