Bengaluru, ಏಪ್ರಿಲ್ 7 -- ಬೆಂಗಳೂರು: ಕರ್ನಾಟಕದಲ್ಲಿ ಬೇಸಿಗೆ ಏರುತ್ತಿರುವ ನಡುವೆಯೇ ಅಲ್ಲಲ್ಲಿ ಮಳೆಯು ಆಗುತ್ತಿದೆ. ಕರಾವಳಿ. ಉತ್ತರ ಕರ್ನಾಟಕ, ಮಲೆನಾಡು, ಹಳೆ ಮೈಸೂರು ಭಾಗದಲ್ಲಿ ಏಪ್ರಿಲ್‌ 7ರ ಸೋಮವಾರವೂ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಹಗುರವಾಗಿ ಹನ್ನೊಂದು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಬಹುದು ಎನ್ನುವ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ. ಬೆಂಗಳೂರಿನ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಗಳಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ, ಮೈಸೂರು ಜಿಲ್ಲೆ ಹಾಗೂ ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಲಘು ಮಳೆ ಗುಡುಗು ಸಹಿತ ಆಗಬಹುದು ಎಂದು ತಿಳಿಸಲಾಗಿದೆ.

Published by HT Digital Content Services with permission from HT Kannada....