Bangalore, ಮಾರ್ಚ್ 31 -- ಬೆಂಗಳೂರು: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ. ಅದರಲ್ಲೂ ದೇಹದ ಪ್ರಮುಖ ಭಾಗಗಳ ದಾನವಂತೂ ಈಗ ದೊಡ್ಡದಾಗಿಯೇ ಬೆಳೆದಿದೆ. ಇದನ್ನು ವ್ಯವಸ್ಥಿತಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆಯು ಈ ಅಂಗಾಂಗ ದಾನ ಯೋಜನೆಗೆ ಹೊಸ ರೂಪ ನೀಡಲು ಕ್ರಮ ಕೈಗೊಂಡಿದೆ. ಮತ್ತೊಬ್ಬರ ಬಾಳಿಗೆ ಬೆಳಕಾಗುವ ಮಹತ್ವದ ಯೋಜನೆಗೆ ಇಲಾಖೆ ಮುಂದಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ತನ್ನ ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ನವೀಕರಿಸಲು ಮತ್ತು ಅಂಗಾಂಗ ಮರು ಪಡೆಯುವ ಕೇಂದ್ರ ಸ್ಥಾಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಸಂಬಂಧ ಆದೇಶ ಕೂಡ ಹೊರಡಿಸಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ 125ನೇ ವರ್ಷಾಚರಣೆ ಸಂದರ್ಭದಲ್ಲಿಯೇ ಈ ಮಹತ್ವದ ಕೇಂದ್ರ ಇಲ್ಲಿ ಆರಂಭವಾಗುತ್ತಿರುವುದು ಮತ್ತೊಂದು ಗಮನಾರ್ಹ ಸಂಗತಿಯಾಗಿದೆ.
ಮೃತ ದಾನಿಗಳಿಂದ ಅಂಗಗಳನ್ನು ಸಂಗ್ರಹಿಸುವ ವಿಶೇಷ ಘಟಕವಾಗಿ ಕಾರ್ಯನಿರ್ವಹಿಸುತ್ತದೆ, ಈ ಕೇಂದ್ರದಲ್ಲಿ ಐಸಿಯು, ಶಸ್ತ್ರಚಿಕಿತ್ಸಾ ಕೊಠಡಿ, ಪ್ರಯೋಗಾಲಯ ಸೌಲಭ್ಯಗ...
Click here to read full article from source
To read the full article or to get the complete feed from this publication, please
Contact Us.