Bangalore, ಮೇ 4 -- ಬೆಂಗಳೂರು: ಈಗಷ್ಟೇ ಕರ್ನಾಟಕ ಎಸ್ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದೆ.ದಕ್ಷಿಣ ಭಾರತದ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿಯೇ ಉತ್ತೀರ್ಣದ ಅಂಕ ಅಧಿಕವಾಗಿದೆ. ಸಿಬಿಎಸ್‌ಸಿ ಉತ್ತೀರ್ಣ ಅಂಕಗಳ ಪ್ರಮಾಣವೂ ಕಡಿಮೆಯಿದೆ. ಕರ್ನಾಟಕದಲ್ಲೂ ಇದೇ ರೀತಿ ಎಸ್ಎಸ್ಎಲ್‌ಸಿ ಉತ್ತೀರ್ಣ ಅಂಕಗಳನ್ನು ಇಳಿಸಿ ಎನ್ನುವ ಬೇಡಿಕೆ ಕೇಳಿ ಬಂದಿದೆ. ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ( KAMS) ಕುರಿತು ಕರ್ನಾಟಕದ ಶಿಕ್ಷಣ ಇಲಾಖೆಗೆ ಮನವಿಯನ್ನು ಸಲ್ಲಿಸಿದೆ. ಇತರೆ ರಾಜ್ಯಗಳಲ್ಲಿ ಎಸ್ಎಸ್ಎಲ್‌ಸಿ ಶಿಕ್ಷಣ, ಪರೀಕ್ಷೆ ಹಾಗೂ ಅಂಕದ ಸ್ವರೂಪದ ಹೇಗಿದೆ ಎನ್ನುವುದನ್ನು ಅಧ್ಯಯನ ಮಾಡಿ ಕರ್ನಾಟಕದಲ್ಲೂ ಇದನ್ನು ಜಾರಿಗೊಳಿಸಿ ಎನ್ನುವುದು ಒಕ್ಕೂಟದ ಮನವಿ.

ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಂತಹ ರಾಜ್ಯಗಳ ಶಿಕ್ಷಣ ವ್ಯವಸ್ಥೆ, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕ್ರಮ,ಅಂಕಗಳು, ಆಂತರಿಕ ಮೌಲ್ಯಮಾಪನ ಅಂಕಗಳ ಪದ್ದತಿಯನ್ನು ಪರಾಮರ್ಶೆ ನಡಸಿದ ನ...