Mysuru, ಫೆಬ್ರವರಿ 11 -- ಮೈಸೂರು: ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಅವಹೇಳನಕಾರಿ ಪೋಸ್ಟ್ ಹಾಕಿದ ವ್ಯಕ್ತಿ ಬಂಧನಕ್ಕೆ ಒತ್ತಾಯಿಸಿ ಮೈಸೂರಿನ ಉದಯಗಿರಿ ವ್ಯಾಪ್ತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಗುಂಪು ಠಾಣೆಗೆ ಮೇಲೆ ಕಲ್ಲು ತೂರಿದೆ. ಈ ವೇಳೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಕಲ್ಲುಗಳನ್ನು ಎಸೆಯಲಾಗಿದ್ದು ಕೆಲವರಿಗೆ ಗಾಯಗಳಾಗಿವೆ. ಸೋಮವಾರ ಸಂಜೆಯಿಂದಲೇ ಪ್ರತಿಭಟನೆ ನಡೆದಿದ್ದು ರಾತ್ರಿ ವೇಳೆ ಕಲ್ಲು ತೂರಾಟದ ಹಂತಕ್ಕೂ ಹೋಗಿದೆ. ವಿಷಯ ತಿಳಿದು ಪೊಲೀಸರು ಉದಯಗಿರಿ ಭಾಗದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಮಂಗಳವಾರವೂ ಉದ್ವಿಗ್ನ ವಾತಾವರಣ ಕಂಡು ಬಂದಿದೆ. ಘಟನೆ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಮೈಸೂರು ಉದಯಗಿರಿ ಪೊಲೀಸರು ಯುವಕನೊಬ್ಬನನ್ನು ಬಂಧಿಸಿದ್ದಾರೆ.
Published by HT Digital Content Services with permission from HT Kannada....
Click here to read full article from source
To read the full article or to get the complete feed from this publication, please
Contact Us.