ಭಾರತ, ಮಾರ್ಚ್ 8 -- ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕನಸವಾಡಿ ಗ್ರಾಮದಲ್ಲಿ ಜಾತ್ರೆ ಸಂಭ್ರಮ ಮನೆಮಾಡಿದೆ. ಇಂದಿನಿಂದಲೇ (ಮಾ.8) ಹಬ್ಬದ ವಾತಾವರಣವಿದ್ದು, ಮಾರ್ಚ್ 9ರಂದು ಶನಿಮಹಾತ್ಮಸ್ವಾಮಿಯ ಎಪ್ಪತ್ತನೇ ಬ್ರಹ್ಮ ರಥೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ 8 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಅಲ್ಲದೆ ಎಲ್ಲಾ ದಿನಗಳಲ್ಲೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ದೂರದ ದೂರದಿಂದ ಜನರು ಬರುವ ನಿರೀಕ್ಷೆ ಇದೆ.
ಕನಸವಾಡಿ ಗ್ರಾಮದ ಶನಿಮಹಾತ್ಮ ಸ್ವಾಮಿಯವರಿಗೆ ಮಾರ್ಚ್ 09ರ ಭಾನುವಾರ ಮಧ್ಯಾಹ್ನ 01:35ರಿಂದ 02:20 ಗಂಟೆಗೆ ಸಲ್ಲುವ ಶುಭ ಮಿಥುನ ಲಗ್ನದಲ್ಲಿ ಬ್ರಹ್ಮ ರಥೋತ್ಸವ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಆಮಂತ್ರಣ ಪತ್ರಿಕೆಯಲ್ಲಿ ತಿಳಿಸಿದೆ. ಒಂದು ವಾರಗಳ ಕಾಲ ಅದ್ದೂರಿ ಜಾತ್ರಾ ಮಹೋತ್ಸವ ನಡೆಯಲಿದ್ದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಕರ್ಷಣೆಯಾಗಿವೆ. ಕಾರ್ಯಕ್ರಮಕ್ಕೆ ಊರ-ಪರವೂರ ಭಕ್ತರನ್ನು ಆಹ್ವಾನಿಸಲಾಗಿದೆ.
ಮಾರ್ಚ್ 9ರಂದು ಕಲಶಾರ್ಚನ...
Click here to read full article from source
To read the full article or to get the complete feed from this publication, please
Contact Us.