ಭಾರತ, ಏಪ್ರಿಲ್ 26 -- ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಬಂದ ನಂತರ ಮರು ಮೌಲ್ಯಮಾಪನ ನಡೆದಿದ್ದು, ಅದರ ಫಲಿತಾಂಶ ಪ್ರಕಟವಾಗಿದೆ. ಮೌರುಮೌಲ್ಯಮಾಪನದ ನಂತರ ಬಂದ ಫಲಿತಾಂಶದಲ್ಲಿ ಹಲವು ಬದಲಾವಣೆಗಳಾಗಿದ್ದು, ವಿಜ್ಞಾನ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ವಾಗ್ದೇವಿ ಪಿಯು ಕಾಲೇಜಿನ ಆರ್‌. ದೀಕ್ಷಾ ಒಬ್ಬರೇ ಪ್ರಥಮ (600/600) ಸ್ಥಾನಕ್ಕೇರಿದ್ದಾರೆ. ಇದೇ ರೀತಿ, ವಾಣಿಜ್ಯ ವಿಭಾಗದಲ್ಲಿ ರಾಜಾಜಿನಗರದ ಎಎಸ್‌ಸಿ ಕಾಲೇಜಿನ ವಿದ್ಯಾರ್ಥಿನಿ ಪಿ. ಪ್ರತೀಕ್ಷಾ 599 ಅಂಕ ಪಡೆದು ಮತ್ತೊಬ್ಬ ಟಾಪರ್ ಎನಿಸಿಕೊಂಡಿದ್ದಾರೆ.

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟವಾದ ಬಳಿಕ ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಪಿಯು ಕಾಲೇಜಿನ ಆರ್‌. ದೀಕ್ಷಾ 600ಕ್ಕೆ 600 ಅಂಕ ಪಡೆದು ಪ್ರಥಮ ರ‍್ಯಾಂಕ್‌ಗೆ ಭಾಜನರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ದೀಕ್ಷಾ ಒಬ್ಬರೇ 600ಕ್ಕೆ 600 ಅಂಕ ಪಡೆದುಕೊಂಡಿರುವುದು.

ದ್ವಿತೀಯ ಪಿಯು ಮರು ಮೌಲ್ಯಮಾಪನದ ನಂತರ 600 ಅಂಕ ಬಂದದ್ದು ನೋಡಿ ಖುಷಿಯಾಗಿದೆ. ಉತ್ತರ ಪತ್ರಿಕೆಗಳ ಸ...