ಭಾರತ, ಮೇ 16 -- ಮಂಗಳೂರು: ಪುತ್ತೂರು ಬೈಪಾಸ್ ರಸ್ತೆಯ ಜೈನಭವನದಲ್ಲಿ ಮೇ 15ರಂದು ನಡೆದ ಕಾರ್ಯಕ್ರಮದಲ್ಲಿ ಬಜರಂಗದಳದ ಮುಖಂಡ ಭರತ್ ಕುಮ್ಡೇಲು ಕೋಮುದ್ವೇಷವನ್ನು ಉಂಟುಮಾಡುವ ಭಾಷಣ ಮಾಡಿದ್ದಾರೆ ಎಂದು ಎಸ್‌ಡಿಪಿಐ ಮುಖಂಡರು ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು ಜೈನಭವನದಲ್ಲಿ ಮೇ 15 ರಂದು ನಡೆದ ಕಾರ್ಯಕ್ರಮದಲ್ಲಿ ಬಜರಂಗ ದಳದ ಮುಖಂಡ ಭರತ್ ಕುಮ್ಡೇಲು ಕೋಮು ದ್ವೇಷದ ಮಾತುಗಳನ್ನು ಆಡಿದ್ದಾರೆ. ಆ ಮಾತುಗಳು ಕೋಮು ಸಾಮರಸ್ಯ ಕದಡುವ ಹಾಗೂ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟುಮಾಡುವ ಸಾಧ್ಯತೆ ಇರುವ ಕಾರಣ ಅವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಎಸ್‌ಡಿಪಿಐ ಮುಖಂಡರು ದೂರು ನೀಡಿದ್ದಾರೆ. ಈ ದೂರಿನ ಪ್ರಕಾರ, ಭರತ್ ಕುಮ್ಡೇಲು ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ 35/2025 ಕಲಂ-196,353(2) BNS 2023. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಕುರಿತು ಪ್ರ...