ಭಾರತ, ಮಾರ್ಚ್ 25 -- ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ಹೇಳಿಕೆ, ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ ಹೊರಡಿಸಿದೆ ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ. ಈ ಆದೇಶದಂತೆ ಯಾರೂ ಕೂಡ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರು ಮತ್ತು ಧರ್ಮಸ್ಥಳ ಕ್ಷೇತ್ರ ಸಂಬಂಧಿತ ಸಂಸ್ಥೆಗಳ ವಿರುದ್ಧ ಅವಹೇಳನಕಾರಿ ಮತ್ತು ಅಪಪ್ರಚಾರ ಹರಡಲು ಹಾಗೂ ಮಾಹಿತಿ ಪ್ರಕಟ, ಪ್ರಸಾರ ಮಾಡುವಂತಿಲ್ಲ.

ಜಾನ್ ಡೋ (ಅಶೋಕಕುಮಾರ್) ಆದೇಶ ಎಂದರೆ ಅಜ್ಞಾತ ಅಥವಾ ಪತ್ತೆಯಾಗದ ವ್ಯಕ್ತಿಗಳ ವಿರುದ್ಧವೂ ಜಾರಿಯಾಗುವ ಕಾನೂನು ಕ್ರಮ. ಇತ್ತೀಚಿನ ದಿನಗಳಲ್ಲಿ ಸೋಷಿಯಲ್ ಮಿಡಿಯಾ ಮತ್ತು ಇತರ ಆನ್‌ಲೈನ್ ತಾಣಗಳಲ್ಲಿ ಅವಹೇಳನಕಾರಿ ಮತ್ತು ಅಪಪ್ರಚಾರ ಹೆಚ್ಚಿರುವ ಕಾರಣ ಇದನ್ನು ತಡೆಯಲು ಈ ಆದೇಶ ಬಹಳ ಪ್ರಮುಖವಾಗಿದೆ.

ಇದನ್ನೂ ಓದಿ: Dharmsthala News: ಧರ್ಮಸ್ಥಳ ಕುರಿತ ಮಾನಹಾನಿ ರೀತಿಯ ವಿಡಿಯೋಗಳನ್ನು ತೆಗೆಯಲು ಬೆಂಗಳೂರು ನ್ಯಾಯಾಲಯ ಸೂಚನೆ

ಜಾನ್ ಡೋ ಆದೇಶದ ಪ್ರಕಾರ ಶ...