Nanjanagud, ಮೇ 15 -- ಮೈಸೂರು: ದಕ್ಷಿಣ ಕಾಶಿ ಎಂದೇ ಹೆಸರು ಪಡೆದಿರುವ ಪ್ರಮುಖ ಶಿವನ ದೇಗುಲಗಳಲ್ಲಿ ಒಂದಾದ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಈ ವರ್ಷವೂ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ. ಇದಕ್ಕಾಗಿ ಹಿಂದೂ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಇಲಾಖೆಯು ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದೆ. ಮೇ 22 ರಂದು ಉಚಿತ ಸಮೂಹಿಕ ವಿವಾಹವನ್ನು ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಏರ್ಪಡಿಸಲಾಗಿದ್ದು, ಅರ್ಹ ಜೋಡಿಗಳು ಉಚಿತ ಸಾಮೂಹಿಕ ವಿವಾಹಕ್ಕೆ ಮೇ 15 ರೊಳಗೆ ನೋಂದಾಯಿಸಿಕೊಳ್ಳಬಹುದು ಎನ್ನುವುದು ಮೈಸೂರು ಜಿಲ್ಲಾಡಳಿತ ಮಾಡಿರುವ ಮನವಿ.

ವಧುವಿಗೆ ಚಿನ್ನದ ತಾಳಿ ಮತ್ತು ಎರಡು ಚಿನ್ನದ ಗುಂಡು(ಅoದಾಜು 8 ಗ್ರಾಂ ತೂಕ)ನೀಡಲಾಗುತ್ತದೆ. ಈ ಯೋಜನೆಯಡಿ ವಿವಾಹವಾಗಲು ಬಯಸುವವರು ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯ, ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯ, ತಲಕಾಡಿನ ವೈದ್ಯನಾಥೇಶ್ವರಸ್ವಾಮಿ ಹಾಗೂ ಸಮೂಹ ದೇವಾಲಯಗಳು, ಜಿಲ್ಲಾಧಿಕಾರಿಗಳ ಕಚೇರಿಯ ಧಾರ್ಮಿಕ ದತ್ತಿ ತಹಶೀಲ...