ಭಾರತ, ಮೇ 6 -- ನಾಗರಿಕ ರಕ್ಷಣಾ ಜಿಲ್ಲೆ ಎಂದರೇನು: ಭಾರತ ಮತ್ತು ಪಾಕಿಸ್ತಾನ ಯುದ್ಧಕ್ಕೆ ಸಂಬಂಧಿಸಿದ ಉದ್ವಿಗ್ನತೆ ಹೆಚ್ಚಾಗುತ್ತಿರುವಂತೆಯೇ ಯಾವುದೇ ಸನ್ನಿವೇಶ ಎದುರಿಸುವುದಕ್ಕೆ ಭಾರತೀಯ ನಾಗರಿಕರನ್ನು ಸಜ್ಜುಗೊಳಿಸಲು ಭಾರತ ಸರ್ಕಾರ ಮುಂದಾಗಿದೆ. ಇದರಂತೆ, ಮೇ 7 ರಂದು ಕರ್ನಾಟಕದ ಬೆಂಗಳೂರು, ಮಲ್ಲೇಶ್ವರಂ, ರಾಯಚೂರು ಸೇರಿ 244 ನಾಗರಿಕ ರಕ್ಷಣಾ ಜಿಲ್ಲೆಗಳಲ್ಲಿ (ಸಿವಿಲ್ ಡಿಫೆನ್ಸ್ ಡಿಸ್ಟ್ರಿಕ್ಟ್‌) ಮಾಕ್‌ ಡ್ರಿಲ್ ನಡೆಸಬೇಕು ಎಂದು ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಆದೇಶ ನೀಡಿದೆ. ಕೇಂದ್ರ ಗೃಹ ಸಚಿವಾಲಯ ನಿನ್ನೆ (ಮೇ 5) ಈ ಆದೇಶ ನೀಡಿತ್ತು. ಇಂದು (ಮೇ 6) ಈಗಾಗಲೇ ಇದಕ್ಕೆ ಬೇಕಾದ ಸಿದ್ದತೆಗಳು ನಡೆದಿದ್ದು, ಅವುಗಳ ಮೇಲೆ ಕೇಂದ್ರ ಗೃಹ ಸಚಿವಾಲಯದ ಮುಖ್ಯ ಕಾರ್ಯದರ್ಶಿ ನಿಗಾ ಇರಿಸಿದ್ದಾರೆ. ಜಿಲ್ಲಾಡಳಿತ ಮಾಕ್‌ ಡ್ರಿಲ್ ಅಥವಾ ಅಣಕು ಯುದ್ಧ ತಾಲೀಮು ನಡೆಯುವಂತೆ ನೋಡಿಕೊಳ್ಳಬೇಕಾಗಿದೆ. ಜನರನ್ನು ಜಾಗೃತಗೊಳಿಸುವ ಕೆಲಸ ಒಂದು ಕಡೆಯಾದರೆ, ಇನ್ನೊಂದೆಡೆ ಸರ್ಕಾರಿ ವ್ಯವಸ್ಥೆಯನ್ನು ಚುರುಕುಗೊಳಿಸುವ ಉದ್ಧೇಶ ಈ ತಾಲೀಮಿ...