ಭಾರತ, ಏಪ್ರಿಲ್ 21 -- ಕರ್ನಾಟಕದ ನಿವೃತ್ತ ಪೊಲೀಸ್‌ ಮಹಾನಿರ್ದೇಶಕ (DGP) ಓಂ ಪ್ರಕಾಶ್‌ ಕೊಲೆ ಪ್ರಕರಣ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಪತ್ನಿ ಹಾಗೂ ಮಗಳೊಂದಿಗೆ ವಾಸವಾಗಿದ್ದ ನಿವೃತ್ತ ಡಿಜಿಪಿ, ಏಪ್ರಿಲ್ 20ರ ಭಾನುವಾರ ಭೀಕರವಾಗಿ ಕೊಲೆಯಾಗಿದ್ದರು. ಹತ್ಯೆಗೆ ಸಂಬಂಧಿಸಿದಂತೆ ಓಂ ಪ್ರಕಶ್‌ ಮಗ ದೂರು ನೀಡಿದ್ದು, ಓಂ ಪ್ರಕಾಶ್‌ ಪತ್ನಿ ಹಾಗೂ ಮಗಳನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡಿದ್ದ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರ ಸಾವು ಸಹಜವಾಗಿ ಸಂಚಲನ ಸೃಷ್ಟಿಸಿದ್ದು, ಪ್ರಕರಣ ಸಂಬಂಧ ಈವರೆಗಿನ ಪ್ರಮುಖ 10 ಅಂಶಗಳನ್ನು ನೋಡೋಣ.

ಓಂ ಪ್ರಕಾಶ್‌ ಅವರ ಅಂತಿಮ ವಿಧಿವಿಧಾನ ನಡೆದಿದೆ. ಹಿರಿಯ ಅಧಿಕಾರಿಯೊಬ್ಬರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

ಇದನ್ನೂ ಓದಿ | ಜೀವ ಉಳಿಸಿಕೊಳ್ಳಲು ಗಂಡನ ಹತ್ಯೆ; ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂಪ್ರಕಾಶ್‌ ಕೊಲೆ ರಹಸ್ಯ ಬಿಚ್ಚಿಟ್ಟ ಪತ್ನಿ ಪಲ್ಲವಿ

Published by HT Digital Content Servic...