Bengaluru, ಮೇ 5 -- ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 22 ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ, ಭಾರತದ ಮೇಲೆ ದಾಳಿ ಮಾಡಲು ಧೈರ್ಯ ಮಾಡುವವರಿಗೆ ಸೂಕ್ತ ಉತ್ತರ ನೀಡುವುದು ತಮ್ಮ ಜವಾಬ್ದಾರಿಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಶೈಲಿಯನ್ನು ಜನರಿಗೆ ನೆನಪಿಸಿದರು. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನೀವು ಏನನ್ನು ಬಯಸುವಿರೋ ಅದು ಖಂಡಿತವಾಗಿಯೂ ನಡೆಯುತ್ತದೆ ಎಂದು ನಾನು ನಿಮಗೆ ಭರವಸೆ ನೀಡಲು ಬಯಸುತ್ತೇನೆ ಎಂದು ಹೇಳಿದರು. "ನಮ್ಮ ಪ್ರಧಾನಿಯ ಬಗ್ಗೆ ನಿಮಗೆ ಚೆನ್ನಾಗಿ ತಿಳಿದಿದೆ, ಅವರ ಕಾರ್ಯಶೈಲಿ, ದೃಢನಿಶ್ಚಯ ನಿಮಗೆ ತಿಳಿದಿದೆ" ಎಂದು ರಾಜನಾಥ್ ಸಿಂಗ್ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದರು.
ಒಂದೆಡೆ, ನಮ್ಮ ಸೈನಿಕರು ರಣಭೂಮಿಯಲ್ಲಿ ಹೋರಾಡುತ್ತಿದ್ದರೆ, ಮತ್ತೊಂದೆಡೆ, ನಮ್ಮ ಸಂತರು 'ಜೀವ ಭೂಮಿ' ಯಲ್ಲಿ ...
Click here to read full article from source
To read the full article or to get the complete feed from this publication, please
Contact Us.