Shmoga, ಮೇ 7 -- ಶಿವಮೊಗ್ಗ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಎರಡು ವಾರದ ಹಿಂದೆ ನಡೆದ ಉಗ್ರರ ದಾಳಿಯಲ್ಲಿ ತಮ್ಮ ಕುಟುಂಬದವರನ್ನು ಕಳೆದುಕೊಂಡವರು ಈಗ ಕೇಂದ್ರ ಸರ್ಕಾರ ನಡೆಸಿ ಆಪರೇಷನ್‌ ಸಿಂಧೂರ ದಾಳಿಯನ್ನು ಸ್ವಾಗತಿಸಿದ್ದಾರೆ. ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಭಯೋತ್ಪಾದನೆ ಚಟುವಟಿಕೆಗಳಲ್ಲಿ ಭಾಗಿಯಾದವರನ್ನು ಕೊಂದು ಹಾಕಿರುವ ಕ್ರಮದ ಬಗ್ಗೆಯೂ ಸಂತಸ ವ್ಯಕ್ತಪಡಿಸಿದ್ದಾರೆ. ಕೇಂ ದ್ರ ಸರ್ಕಾರದವರು ಉಗ್ರರನ್ನು ಗುರಿಯಾಗಿಸಿ ಸರಿಯಾದ ನಿರ್ಧಾರ ತೆಗೆದುಕೊಂಡಿದ್ದಾರೆ. ಅಮಾಯಕರಿಗೆ ತೊಂದರೆಯಾಗದೇ ಉಗ್ರರನ್ನು ಹೀಗೆಯೇ ಸೆದೆ ಬಡಿಯಬೇಕು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಮೂಲದ ರಿಯಲ್‌ಎಸ್ಟೇಟ್‌ ಉದ್ಯಮಿ ಮಂಜುನಾಥ್‌ರಾವ್‌ ಅವರನ್ನು ಪತಿ ಹಾಗೂ ಮಗನ ಎದುರಿನಲ್ಲಿಯೇ ಉಗ್ರಗಾಮಿಗಳು ಕೊಂದು ಹಾಕಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.ಇವರೊಂದಿಗೆ ಕರ್ನಾಟಕದ ಬೆಂಗಳೂರಿನವರಾದ ಭರತ್‌ ಭೂಷಣ್‌ ಎಂಬುವವರೂ ಹತರಾಗಿದ್ದರು.

ನಮ್ಮ ಕುಟುಂಬದ ಸದಸ್ಯರನ್ನು ಕಾಶ್ಮೀರದಲ್ಲಿ ನಡೆದಿದ್ದ ದಾಳಿಯಲ್ಲಿ ಕಳ...