ಭಾರತ, ಏಪ್ರಿಲ್ 30 -- ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಉಗ್ರರ ದಾಳಿಯ ನಂತರ ದೇಶದ ವಾತಾವರಣ ಬದಲಾಗಿದೆ. ಉಗ್ರ ಸಂಘಟನೆಗಳಿಗೆ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಈಗಾಗಲೇ ಪಾಕಿಸ್ತಾನದ ವಿರುದ್ಧ ಕೆಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ ಕೇಂದ್ರ ಸರ್ಕಾರ. ಈ ನಡುವೆ ಭಾರತ-ಪಾಕಿಸ್ತಾನ ನಡುವೆ ಯುದ್ಧ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನುವ ಗಾಳಿ ಮಾತು ಕೂಡ ಕೇಳಿ ಬರುತ್ತಿದೆ. ಮುಂದಿನ 24 ರಿಂದ 36 ಗಂಟೆಗಳಲ್ಲಿ ಭಾರತದಿಂದ ದಾಳಿ ನಡೆಯಬಹುದು ಎಂದು ಪಾಕ್ ಸಚಿವ ಅತ್ತಾವುಲ್ಲ ತರಾರ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ಸಂಪುಟ ಸಮಿತಿಗಳ ಸಭೆ ನಡೆದಿದೆ. ಈ ಸಂಪುಟ ಸಮಿತಿ ಸಭೆಯಲ್ಲಿ ನಾಲ್ಕು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ. ಇಂದು ಮೋದಿ ಹಲವು ಪ್ರಮುಖ ಸಭೆಗಳನ್ನು ನಡೆಸಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್ ಮತ್ತು ಎಲ್ಲಾ ಸಶಸ್ತ್ರ ಪಡೆಗಳ ಮ...