ಭಾರತ, ಮೇ 8 -- ದೆಹಲಿ: ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ಗುಜರಾತ್ ಸೇರಿದಂತೆ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಭಾರತೀಯ ಮಿಲಿಟರಿ ಸ್ಥಾಪನೆಗಳನ್ನು ಗುರಿಯಾಗಿಸಿಕೊಂಡು ಗುರುವಾರ ತಡರಾತ್ರಿ ಮತ್ತು ಬೆಳಗಿನ ಜಾವ ಉದ್ವಿಗ್ನತೆಯನ್ನು ಹೆಚ್ಚಿಸಲು ಪಾಕಿಸ್ತಾನ ಮಾಡಿದ ಪ್ರಯತ್ನಗಳನ್ನು ಭಾರತ ಸೇನೆ ತಡೆದಿವೆ. ಎಂದು ಸರ್ಕಾರ ಗುರುವಾರ ತಿಳಿಸಿದೆ. ಅಲ್ಲದೇ ಶ್ರೀನಗರ, ಪಠಾಣ್‌ಕೋಟ್, ಅಮೃತಸರ, ಲುಧಿಯಾನ ಮತ್ತು ಚಂಡೀಗಢ ಸೇರಿದಂತೆ ಹದಿನೈದಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ಮಾಡಲು ಪಾಕ್ ಮಾಡಿದ ಪ್ರಯತ್ನಗಳಿಗೆ ಪ್ರತಿಕ್ರಿಯೆಯಾಗಿ ಲಾಹೋರ್ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಪಾಕಿಸ್ತಾನದ ವಾಯು ರಕ್ಷಣಾ ರಾಡಾರ್‌ಗಳು ಮತ್ತು ವ್ಯವಸ್ಥೆಗಳನ್ನು ಭಾರತೀಯ ಪಡೆಗಳು ಗುರಿಯಾಗಿಸಿ ಧ್ವಂಸಗೊಳಿಸಿದೆ ಎಂದು ಸರ್ಕಾರ ಹೇಳಿದೆ.

ಶ್ರೀನಗರ, ಪಠಾಣ್‌ಕೋಟ್, ಅಮೃತಸರ, ಲುಧಿಯಾನ ಮತ್ತು ಚಂಡೀಗಢ ಸೇರಿದಂತೆ ಹಲವು ಸ್ಥಳಗಳ ಮೇಲೆ ದಾಳಿ ಮಾಡಲು ಪಾಕಿಸ್ತಾನ ಮಾಡಿದ ಪ್ರಯತ್ನಗಳಿಗೆ ಪ್ರತಿಯಾಗಿ, ಪಾಕಿಸ್ತಾನದ ಪ್ರಮುಖ ನಗರ ಲಾಹೋರ್ ಸೇರಿದ...