Mangalore, ಮೇ 8 -- ಮಂಗಳೂರು:ಭಯೋತ್ಪಾದಕರ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಕೈಗೊಂಡಿರುವ ಕ್ರಮಗಳ ನಂತರದ ಬೆಳವಣಿಗೆಯಲ್ಲಿ ಪಾಕಿಸ್ತಾನ ಭಾರತದ ಮೇಲೆ ಕಿಡಿಗೇಡಿ ಕೃತ್ಯವೆಸಗುವ ಸಾಧ್ಯತೆಯ ಕಾರಣದಿಂದ ಮುಂಜಾಗರೂಕತಾ ಕ್ರಮವಾಗಿ ಕರ್ನಾಟಕ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಣೆಯನ್ನು ಮಾಡಲಾಗಿದೆ. ಕಾಶ್ಮೀರ ರಾಜ್ಯದ ಪೆಹಲ್ಗಾಮ್ ಪ್ರದೇಶದಲ್ಲಿ ಅಮಾನವೀಯವಾಗಿ ಭಯೋತ್ಪಾದಕರು ಸುಮಾರು 26 ಮಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ ಗಡಿಭಾಗದಲ್ಲಿ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿತ್ತು. ಈ ಸಂದರ್ಭ ಉಗ್ರರ ನೆಲೆಯನ್ನು ಗುರಿಯಾಗಿಸಿ ದಾಳಿ ಮಾಡಲಾಗಿತ್ತು. ಗುರುವಾರ ಪಾಕಿಸ್ತಾನ ಅಪ್ರಚೋದಿತ ದಾಳಿಯನ್ನು ನಾಗರಿಕರನ್ನು ಗುರಿಯಾಗಿಸಿ ಮಾಡಲಾಗಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸರ್ವಪಕ್ಷ ಸಭೆಯನ್ನು ಕರೆಯಲಾಗಿತ್ತು.

ಇದೀಗ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬೆನ್ನಲ್ಲೇ ರಾಜ್...