Bengaluru, ಮೇ 3 -- ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರ ದಾಳಿಯ ಹಿನ್ನಲೆಯಲ್ಲಿ ಭಾರತ ಸರ್ಕಾರ ತಮ್ಮ ವಿರುದ್ಧ ತೆಗೆದುಕೊಂಡಿರುವ ಕ್ರಮಗಳಿಗೆ ಪ್ರತ್ಯುತ್ತರವಾಗಿ, ಪಾಕಿಸ್ತಾನ ಶಿಮ್ಲಾ ಒಪ್ಪಂದ ಸೇರಿದಂತೆ ದ್ವಿಪಕ್ಷೀಯ ಒಪ್ಪಂದಗಳನ್ನು ಅಮಾನಿತಿನಲ್ಲಿಟ್ಟಿದೆ. ಒಂದು ವೇಳೆ ಪಾಕಿಸ್ತಾನ ಅಧಿಕೃತವಾಗಿ ಶಿಮ್ಲಾ ಒಪ್ಪಂದವನ್ನು ರದ್ದುಗೊಳಿಸಿದರೆ, ಅದು ಎಲ್ಒಸಿಯ ಪರಿಕಲ್ಪನೆಯನ್ನೇ ರದ್ದುಗೊಳಿಸಿ ಭವಿಷ್ಯದ ಯಾವುದೇ ಮಾತುಕತೆಗಳಿಗೆ ಬಾಗಿಲು ಮುಚ್ಚುವಂತೆ ಮಾಡುತ್ತದೆ. ಕಳೆದ ಆರು ದಶಕಗಳಿಂದ ಪಾಕಿಸ್ತಾನದಿಂದ ಇಂಥದ್ದೇ ಬೆದರಿಕೆಗಳು ಅಂತರರಾಷ್ಟ್ರೀಯ ರಾಜತಾಂತ್ರಿಕ ವಲಯಗಳಲ್ಲಿ ಹರಿದಾಡುತ್ತಿವೆ.

1971ರ ಬಾಂಗ್ಲಾ ವಿಮೋಚನಾ ಯುದ್ಧದಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನ ಸೈನಿಕರನ್ನು ಭಾರತ ಸದೆಬಡಿದಿತ್ತು. ಇದಾದ ನಂತರ ಭಾರತದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಮತ್ತು ಪಾಕ್ ಪ್ರಧಾನಿ ಜುಲ್ಫೀಕರ್ ಅಲಿ ಭುಟ್ಟೋ ಜುಲೈ 2, 1972ರಂದು ಶಿಮ್ಲಾ ಒಪ್ಪಂದಕ್ಕೆ ಸಹಿ ಹಾಕಿದರು. ಶಿಮ್ಲಾ ಒಪ್ಪಂದವು ಉಭಯ ದೇಶಗಳ ನಡುವೆ ಶಾಂತಿ...