ಭಾರತ, ಮೇ 7 -- ಪಹಲ್ಗಾಮ್‌ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತ ಸೇನೆ, ʻಆಪರೇಷನ್‌ ಸಿಂಧೂರʼ ಹೆಸರಿನಲ್ಲಿ ಬುಧವಾರ ಬೆಳಗಿನಜಾವ ಪಾಕಿಸ್ತಾನದ ಗಡಿ ಭಾಗದಲ್ಲಿ ದಾಳಿ ನಡೆಸಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳು ಮತ್ತು ಲಾಂಚ್‌ಪ್ಯಾಡ್‌ಗಳು ಸೇರಿ ಒಟ್ಟು ಒಂಬತ್ತು ಉಗ್ರ ತಾಣಗಳ ಮೇಲೆ ಭಾರತ ಸೇನೆ ಸರಣಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಹಲವು ಉಗ್ರರು ಸತ್ತಿರುವ ಶಂಕೆ ವ್ಯಕ್ತವಾಗಿದೆ. ಗಡಿಯಲ್ಲಿ ಭಾರತ ಮತ್ತು ಪಾಕ್‌ ನಡುವಿನ ಉದ್ವಿಘ್ನತೆ ಹೆಚ್ಚುತ್ತಿರುವ ಬೆನ್ನಲ್ಲೇ, ವಿಮಾನಯಾನ ಸಂಸ್ಥೆಗಳೂ ಪ್ರಯಾಣಿಕರಿಗೆ ಒಂದಷ್ಟು ಸಲಹೆಗಳನ್ನು ನೀಡಿವೆ.

ಹೌದು ಎರಡು ರಾಷ್ಟ್ರಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಭಾರತೀಯ ವಿಮಾನಯಾನ ಕಂಪನಿಗಳು ಎಲ್ಲ ಪ್ರವಾಸಿಗರಿಗೆ, ವಿಶೇಷವಾಗಿ ಉತ್ತರ ಭಾರತದ ಕಡೆಗೆ ಪ್ರಯಾಣಿಸುವವರಿಗೆ ಪ್ರಯಾಣ ಸಲಹೆಯನ್ನು ನೀಡಿವೆ. ಜತೆಗೆ ಇಂದು (ಮೇ 7) ಮಧ್ಯಾಹ್ನ 12 ಗಂಟೆ ವರೆಗೆ ಕೇಂದ್ರದ ಸೂಚನೆ ಬರುವವರೆಗೆ ವಿಮಾನಯಾನ ಸೇವೆಗಳನ್ನು ರದ್ದುಪಡಿಸಿದೆ. ಅದರಂತೆ, ಧರ್ಮಶ...