Bengaluru, ಮೇ 17 -- ನವದೆಹಲಿ: ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ಕುರಿತು ಬಲವಾದ ಸಾಕ್ಷ್ಯಗಳನ್ನು ಈಗಾಗಲೇ ಭಾರತೀಯ ಸೇನೆ ಒದಗಿಸಿದ್ದರೂ, ಭಾರತ ಸರ್ಕಾರವು ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಉನ್ನತ ಮಟ್ಟದ ರಾಜತಾಂತ್ರಿಕ ನಿಯೋಗದ ಮೂಲಕ ಪಾಕಿಸ್ತಾನದ ಕುತಂತ್ರವನ್ನು ಬಯಲು ಮಾಡಲು ಮುಂದಾಗಿದೆ. ಅದಕ್ಕಾಗಿ ಕಾಂಗ್ರೆಸ್ ನಾಯಕ ಶಶಿ ತರೂರ್ ನೇತೃತ್ವದಲ್ಲಿ ದೇಶವನ್ನು ಪ್ರತಿನಿಧಿಸುವ ಸಂಸದರ ಸರ್ವಪಕ್ಷ ನಿಯೋಗಗಳನ್ನು ಘೋಷಿಸಿದೆ.

ಜಾಗತಿಕವಾಗಿ ಪಾಕಿಸ್ತಾನದ ಭಯೋತ್ಪಾದನೆಯ ಮುಖವನ್ನು ತೆರೆದಿಡುವುದು ಮತ್ತು ಭಯೋತ್ಪಾದನೆಯನ್ನು ಎದುರಿಸಲು ಭಾರತದ ರಾಷ್ಟ್ರೀಯ ಒಮ್ಮತ ಮತ್ತು ದೃಢವಾದ ವಿಧಾನವನ್ನು ಬಿಂಬಿಸುವುದು ಈ ಮಿಷನ್ನ ಗುರಿಯಾಗಿದ್ದು, ಅದಕ್ಕೆ ಪೂರಕವಾಗಿ ಸಂಸದೀಯ ವ್ಯವಹಾರಗಳ ಸಚಿವಾಲಯ ನಿಯೋಗವನ್ನು ರಚಿಸಿದೆ. ನಿಯೋಗದ ಸದಸ್ಯರು ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ದೇಶದ ಬಲವಾದ ಸಂದೇಶವನ್ನು ಜಗತ್ತಿಗೆ ಕೊಂಡೊಯ್ಯುತ್ತಾರೆ ಎಂದು ಸಚಿವಾಲಯ ತಿಳಿಸಿದೆ.

ಕಾಂಗ್ರೆಸ್ ನಾಯಕ ಶಶಿ ತರೂರ್ ನೇತೃತ್ವದ ನಿಯೋಗದಲ್ಲಿ ...