ಭಾರತ, ಏಪ್ರಿಲ್ 30 -- ದೇಶದ ರೈತರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ತರಲಾದ ಪಿಎಂ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತು 2025ರ ಜೂನ್​ನಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಅರ್ಹ ರೈತರು ಈ ಯೋಜನೆಯ ಅಡಿಯಲ್ಲಿ ತಲಾ 2,000 ರೂಪಾಯಿ ಪಡೆಯಲಿದ್ದಾರೆ. ಪಿಎಂ ಕಿಸಾನ್ ಯೋಜನೆಯ 19ನೇ ಕಂತನ್ನು ಇದೇ ವರ್ಷ ಫೆಬ್ರವರಿ 24ರಂದು ಬಿಡುಗಡೆ ಮಾಡಲಾಗಿತ್ತು. 2.4 ಕೋಟಿ ಮಹಿಳಾ ರೈತರು ಸೇರಿದಂತೆ 9.8 ಕೋಟಿಗೂ ಹೆಚ್ಚು ರೈತರು ಇದರ ಪ್ರಯೋಜನ ಪಡೆದಿದ್ದರು. 17ನೇ ಕಂತು 2024ರ ಜೂನ್, 18ನೇ ಕಂತು ಅದೇ ವರ್ಷ ಅಕ್ಟೋಬರ್​ನಲ್ಲಿ ಬಿಡುಗಡೆಯಾಗಿತ್ತು.

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಕೇಂದ್ರ ಸರ್ಕಾರ ಆರಂಭಿಸಿದ ಯೋಜನೆಯಾಗಿದೆ. ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರು ಪಿಎಂ ಕಿಸಾನ್ ಯೋಜನೆಯ ಅಡಿಯಲ್ಲಿ ಪ್ರತಿ 4 ತಿಂಗಳಿಗೊಮ್ಮೆ 2,000 ರೂಪಾಯಿ (ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್, ಡಿಸೆಂಬರ್-ಮಾರ್ಚ್) ಪಡೆಯುತ್ತಾರೆ. ಅದರಂತೆ ಪ್ರತಿ ವರ್ಷ ಒಟ್ಟು 6,000 ರೂಪಾಯಿ ಆರ್ಥಿಕ ಪ್ರಯೋಜನ ಒದಗಿಸುತ್ತದೆ. ಈ ಯೋಜನೆಯನ್ನು 2019...