Bangalore, ಮೇ 21 -- ಬೆಂಗಳೂರು: ಕರ್ನಾಟಕದ ಬೆಂಗಳೂರು, ಉಡುಪಿ, ಶಿವಮೊಗ್ಗ ಸೇರಿದಂತೆ ಮೂರು ದಿನದಿಂದ ಅಬ್ಬರಿಸಿದ್ದ ಪೂರ್ವ ಮುಂಗಾರು ಮುಂದುವರಿದಿದೆ. ಬುಧವಾರವೂ ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕಲಬುರಗಿ, ಬೀದರ್‌, ಗದಗ, ವಿಜಯಪುರ ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗಲಿದ್ದು,ಇಲ್ಲಿ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.ದಕ್ಷಿಣ ಕನ್ನಡ, ಧಾರವಾಡ, ಹಾವೇರಿ, ಬೆಳಗಾವಿ, ಹಾಸನ, ಕೊಡಗ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಇಲ್ಲಿ ಗ್ರೀನ್‌ ಅಲರ್ಟ್‌ ಘೋಷಿಸಲಾಗಿದೆ. ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು ಎನ್ನುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ. ಮಂಗಳವಾರವೂ ಹಲವು ಭಾಗದಲ್ಲಿ ಉತ್ತಮ ಮಳೆಯಾಗಿದೆ. ಅದರಲ್ಲೂ ಉಡುಪಿ ಜಿಲ್ಲೆಯಲ್ಲಿ ಮಳೆ ಕೊಂಚ ಹೆಚ್ಚೇ ಇತ್ತು. ಬೆಂಗಳೂರಿನಲ್ಲಿ ಮಳೆ ಬಿಡುವು ನೀಡಿದ್ದು ಅಲ್ಲಲ್ಲಿ ಹಗುರ ಮಳೆಯಾಗ...