ಭಾರತ, ಏಪ್ರಿಲ್ 1 -- Yogi Adityanath: ಯುಗಾದಿ ದಿನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಗಪುರದಲ್ಲಿ ಆರ್‌ಎಸ್‌ಎಸ್‌ ಪ್ರಧಾನ ಕಚೇರಿಗೆ ಭೇಟಿ ನೀಡಿ ಸರಸಂಘಚಾಲಕ ಮೋಹನ್ ಭಾಗವತ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ಇದರ ಬೆನ್ನಿಗೆ ಶಿವಸೇನಾ ನಾಯಕ ಸಂಜಯ್ ರಾವುತ್, ಪ್ರಧಾನಿ ಮೋದಿ ನಿವೃತ್ತರಾಗುತ್ತಿದ್ದು, ಅವರ ಉತ್ತರಾಧಿಕಾರಿ ಆಯ್ಕೆ ವಿಚಾರ ಚರ್ಚೆ ಮಾಡಿರಬಹುದು ಎಂದು ಹೇಳಿದ್ದರು. ಈ ವದಂತಿ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಹೆಸರು ಮುನ್ನೆಲೆ ಬಂದಿದ್ದು, ಹೆಚ್ಚು ಚರ್ಚೆಯಾಗತೊಡಗಿದೆ. ಈ ವದಂತಿಗೆ ಇಂದು (ಏಪ್ರಿಲ್ 1) ಯೋಗಿ ಆದಿತ್ಯನಾಥ ಅವರು ನೀಡಿರುವ ಉತ್ತರ ಬಹಿರಂಗವಾಗಿದ್ದು, ವೈರಲ್ ಆಗಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಂಗಳವಾರ (ಏಪ್ರಿಲ್ 1) ಭಾರತದ ಪ್ರಧಾನಮಂತ್ರಿಯಾಗುವ ವದಂತಿ ಕುರಿತು ಪ್ರತಿಕ್ರಿಯಿಸಿದ್ದಾರೆ. ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಈ ವಿಚಾರಕ್ಕೆ ಅವರು ಉತ್ತರ ನೀಡಿದ್ದಾರೆ.

ರಾಜಕೀಯ ಎಂಬುದು ನನ್ನ ಪೂರ್ಣ...