Bangalore, ಮೇ 25 -- ಬೆಂಗಳೂರು: ಕಾಂಗ್ರೆಸ್‌ ಪಕ್ಷದಲ್ಲಿರುವ ಹಾಗೆ ಕರ್ನಾಟಕದ ಬಿಜೆಪಿಯಲ್ಲಿ ಮೇಲ್ವರ್ಗಗಳಿಗೆ ಸೇರಿದ ನಾಯಕರ ಕೊರತೆ ಎದುರಿಸುತ್ತಿದೆ. ಈ ಕೊರತೆಯನ್ನು ನೀಗಿಸಲು ಪ್ರಾತಿನಿಧ್ಯ ಹೊಂದಿಲ್ಲದ ಸಮುದಾಯಗಳ ಯುವಕರನ್ನು ಪಕ್ಷದತ್ತ ಸೆಳೆಯಲು ಮುಂದಾಗಿದೆ. ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯತ್‌ ಚುನಾವಣೆಗಳಲ್ಲಿ ಈ ಸಮುದಾಯಗಳಿಗೆ ಆದ್ಯತೆ ನೀಡಲೂ ನಿರ್ಧರಿಸಿದೆ. ಕೇವಲ ಸ್ಥಳೀಯ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಮಾತ್ರವಲ್ಲ, ಮುಂಬರುವ 2028ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ನಾಯಕರನ್ನು ಹುಟ್ಟು ಹಾಕಲು ನಿರ್ಧರಿಸಿದೆ. ಬಿಜೆಪಿ ಮೈಸೂರು ಚಲೋ ಮತ್ತು ಜನಾಕ್ರೋಶ ಯಾತ್ರೆಗಳನ್ನು ನಡೆಸಿದೆಯಾದರೂ ಕಾಂಗ್ರೆಸ್‌ ನ ಪ್ರಮುಖ ನಾಯಕರಿಗೆ ಪರ್ಯಾಯ ನಾಯಕರಿಲ್ಲದಿರುವ ಕೊರತೆಯನ್ನು ಕಂಡುಕೊಂಡಿದೆ. ಕುರುಬ ಮತ್ತು ಅಹಿಂದ ವರ್ಗಗಳ ಮೇಲೆ ಹಿಡಿತ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಕ್ಕಲಿಗ ಸಮುದಾಯದ ಮೇಲೆ ಹಿಡಿತ ಹೊಂದಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ಪರಿಶಿಷ್ಟ ಜಾತಿಯ ಮೇಲೆ...